Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳೆ ನಷ್ಟ : ರೈತರು ಆತ್ಮಹತ್ಯೆ ಮಾಡಿಕೊಂಡಾಗ ಕೊಡುವ ಪರಿಹಾರ ಬದುಕಿದ್ದಾಗಲೆ ಕೊಡಿ : ರೈತರ ಅಳಲು

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 24 : ತಾಲೂಕಿನಲ್ಲಿ ಸುಮಾರು 2200 ಹೆಕ್ಟರ್ ಭೂಮಿಯಲ್ಲಿ ನಾಟಿ ಮಾಡಲಾಗಿದ್ದ ಈರುಳ್ಳಿ ಬೆಳೆಗಾರರಿಗೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಕೈಗೆ ಬಂದ ಬೆಳೆ ಬಾಯಿಗೆ ಸಿಗದಂತಾಗಿದೆ. ಮಾರುಕಟ್ಟೆಯಲ್ಲಿ ಒಂದು ಪಾಕೆಟ್‌ಗೆ 2 ಸಾವಿರ ತನಕ ಒಳ್ಳೆಯ ರೇಟಿದೆ. ಆದರೆ, ಜಮೀನಿನಲ್ಲಿ ಕಟಾವು ಮಾಡಿಕೊಂಡ ಈರುಳ್ಳಿಯನ್ನು ಮಳೆಯಿಂದ ರಕ್ಷಣೆ ಮಾಡಿಕೊಳ್ಳುವುದು ರೈತರಿಗೆ ಒಂದು ಸವಾಲಾಗಿ ಪರಿಣಮಿಸಿದೆ.

ತಾಲೂಕಿನ ವಿಡುಪನಕುಂಟೆ ಗ್ರಾಮದ ರೈತ ಇ. ರಾಜಣ್ಣ ಜೂನ್ ತಿಂಗಳಲ್ಲಿ ಮೂರು ಎಕರೆ ಜಮೀನಿನಲ್ಲಿ 6 ಕೆಜಿ ಈರುಳ್ಳಿ ನಾಟಿ ಮಾಡಲಾಗಿತ್ತು. ಕಟಾವು ಮಾಡಿರುವ ಪರಿಸ್ಥಿತಿಯಲ್ಲಿ ಅತಿಯಾದ ಮಳೆಯಿಂದ ಶೇ.60 ರಷ್ಟು ಈರುಳ್ಳಿ ಮಳೆನೀರು ಪಾಲಾಗಿದೆ. 2 ರಿಂದ 3 ಲಕ್ಷ ಖರ್ಚು ಮಾಡಿಕೊಂಡು ಬೆಳೆ ಪೋಷಣೆ ಮಾಡಿಕೊಳ್ಳಲಾಗಿತ್ತು. ಮಾರುಕಟ್ಟೆಯಲ್ಲಿ ಒಳ್ಳೆ ಬೆಲೆ ಇದೆ ಈ ಸಮಯದಲ್ಲೂ ರೈತರಿಗೆ ಈರುಳ್ಳಿ ಬೆಳೆ ನಷ್ಟವಾಗಿದೆ. ಸಾಲಕ್ಕೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪರಿಹಾರ ನೀಡುವುದು ಮುಖ್ಯವಲ್ಲ. ಸಾಲಗಾರರಾದ ರೈತರಲ್ಲಿ ಕೃಷಿ ಚಟುವಟಿಕೆ ಉತ್ಸಾಹ ತುಂಬಲು ಮತ್ತು ಕುಟುಂಬ ರಕ್ಷಣೆ ಮಾಡಲು ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ವಿತರಣೆ ಮಾಡಬೇಕು ಎಂದು ಇ.ರಾಜಣ್ಣ ಮನವಿ ಮಾಡಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಭಾರತದಲ್ಲಿ ಶೇ 72.8 ರಷ್ಟು ಪುರುಷರ ಆತ್ಮಹತ್ಯೆ: ಸದ್ದಿಲ್ಲದೆ ಆವರಿಸುತ್ತಿರುವ ಮಾನಸಿಕ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ತಜ್ಞರ ಆತಂಕ!

ಯುವ ಭಾರತೀಯರಲ್ಲಿ ಹೃದಯಾಘಾತಕ್ಕೆ ಲಸಿಕೆಯಲ್ಲ, ಧೂಮಪಾನ ಮತ್ತು ತೀವ್ರ ಕೋವಿಡ್‌ ಕಾರಣ: ICMR ಅಧ್ಯಯನ

ಬೆಂಗಳೂರು ಕಲ್ಲು ಕ್ವಾರಿ ದುರಂತದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ : ಕೇಂದ್ರ ಸಚಿವ ಹೆಚ್‌ ಡಿಕೆ ಒತ್ತಾಯ

ವಿಜ್ಞಾನ ಲೋಕದಲ್ಲಿ ಹೊಸ ಕ್ರಾಂತಿ; ಸ್ವತಃ ಆಹಾರ ಸೇವಿಸಿ, ಬೆಳೆದು, ಸಂತಾನೋತ್ಪತ್ತಿ ಮಾಡುವ ಕೃತಕ ಜೀವಕೋಶ ‘ಸ್ಪಡ್‌ಸೆಲ್’ ಸೃಷ್ಟಿ!

ಪೋಷಕರೇ ಗಮನಿಸಿ; ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್ ಕಡ್ಡಾಯ, ಸೆಪ್ಟೆಂಬರ್ 30ರವರೆಗೆ ಉಚಿತ ಅವಕಾಶ!

ರೇಣುಕಾಸ್ವಾಮಿ ಕೊಲೆ ಪ್ರಕರಣ :ನಟ ದರ್ಶನ್ ವಿರುದ್ಧ ಸಾಕ್ಷ್ಯ ಹೇಳದಂತೆ ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರ ಬಂಧನ!

Leave a Comment