Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

Facebook
Twitter
Telegram
WhatsApp

 

ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ ಭಕ್ತರು ದೇವಸ್ಥಾನದ ಬಳಿ ಕ್ಯೂ ನಿಂತಿದ್ದಾರೆ. ತಾಯಿಯ ದರ್ಶನ ಪಡೆಯಲು ಉತ್ಸುಕರಾಗಿದ್ದಾರೆ.

ಮೈಸೂರು ಸಂಸ್ಥಾನದ ಪ್ರಮೋದಾ ದೇವಿ ಅವರು ಕೂಡ ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆ 4 ಗಂಟೆಗೆ ದರ್ಶನ ಪಡೆದಿದ್ದಾರೆ. ಹಾಸನಾಂಬೆ ತಾಯಿಗೆ ಪ್ರಮೋದಾ ದೇವಿ ಅವರು ವಿಶೇಷ ಪೂಜೆ ಸಲ್ಲಿಸಿದರು. ತಾಯಿ ದರ್ಶನ ಪಡೆದು ಪುನೀತರಾದರು. ಪ್ರಮೋದಾ ದೇವಿ ಅವರನ್ನು ಕಂಡು ಭಕ್ತರು ಖುಷಿ ಪಟ್ಟರು.

ಮಧ್ಯರಾತ್ರಿಯಿಂದಾನೇ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಸರತಿ ಸಾಲಲ್ಲಿ ನಿಂತು ತಾಯಿಯ ದರ್ಶನ ಪಡೆದಿದ್ದಾರೆ. 10 ದಿನಗಳ ಕಾಲ ತಾಯಿಯ ದರ್ಶನಕ್ಕೆ ಅವಕಾಶ ಇರಲಿದೆ. ಇಂದಿನಿಂದ ಶುರುವಾಗಿರುವ ಹಾಸನಾಂಬೆಯ ದರ್ಶನ ನವೆಂಬರ್ 3ರವರೆಗೆ ನಡೆಯಲಿದೆ. ರಾತ್ರಿ 11 ಗಂಟೆಯವರೆಗೂ ತಾಯಿಯ ದರ್ಶನ ಭಾಗ್ಯ ಸಿಗಲಿದೆ. ಭಕ್ತರು ತಾಯಿಯ ದರ್ಶನವನ್ನು ಪಡೆದು ಪುನೀತರಾಗಬಹುದು.

ಹಾಸನಾಂಬೆಯ ದೇವಸ್ಥಾನದ ಗರ್ಭಗುಡಿಯ ಬಾಗಿಲು ವರ್ಷಕ್ಕೆ ಒಂದೇ ಸಲ ತೆಗೆಯುವುದು. ಹತ್ತು ದಿನ ಮಾತ್ರ ತೆಗೆದಿರುತ್ತದೆ. ಮೊದಲಿನಿಂದಾನೂ ಇದು ವಿಶಿಷ್ಠ ಸಂಪ್ರದಾಯವಾಗಿರುತ್ತದೆ. ಅಶ್ವಯುಜ ಮಾಸದ ಅಷ್ಟಮಿ ದಿನ ಬಾಗಿಲನ್ನು ಸ್ವಾಮೀಜಿ ಮತ್ತು ಹಿರಿಯರು ತೆಗೆಯುತ್ತಾರೆ. ಈ ವೇಳೆ ರಾಜಕಾರಣಿಗಳು ಕೂಡ ಇರುತ್ತಾರೆ. ಬಾಗಿಲ ತೆಗೆದಾಕ್ಷಣ ಕಳೆದ ವರ್ಷ ಹಚ್ಚಿದ ದೀಪ ಹಾಗೇ ಉರಿಯುತ್ತಿತ್ತು. ಇದನ್ನು ಕಂಡು ಭಕ್ತರು ಪುನೀತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಮಾದಿಗ ಮಹಾಸಭಾ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಮಾದಿಗ ಮಹಾಸಭಾದವರು ಜಾಲಿಕಟ್ಟೆ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ತಮಟೆ ಬಾರಿಸುತ್ತ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ

error: Content is protected !!