Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಡಿತರ ಸಿಗದೆ BPL ಕಾರ್ಡುದಾರರು ಕಂಗಾಲು : ಇಷ್ಟೊಂದು ತಡವಾಗುವುದಕ್ಕೆ ಕಾರಣವೇನು..?

Facebook
Twitter
Telegram
WhatsApp

 

 

ಬಿಪಿಎಲ್ ಕಾರ್ಡು ಹೊಂದಿರುವವರು ಪ್ರತಿ ತಿಂಗಳು ಸರ್ಕಾರದಿಂದ ಸಿಗುವ ಅಕ್ಕಿಗಾಗಿಯೇ ಕಾಯುತ್ತಿರುತ್ತಾರೆ. ಇದರಿಂದ ಎಷ್ಟೋ ಜನರ ಹೊಟ್ಟೆ ತುಂಬುತ್ತದೆ. ಆದರೆ ಅದ್ಯಾಕೋ ಏನೋ ಈ ಬಾರಿ ಪಡಿತರ ಬಡವರ ಕೈಗೆ ಸಿಕ್ತಿಲ್ಲ. ನ್ಯಾಯಬೆಲೆ ಅಂಗಡಿ ಮುಂದೆ ನಿಂತು ಕಾದು ಕಾದು ಸುಸ್ತಾಗಿ ಜನ ವಾಪಾಸ್ ಹೋಗುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಸರ್ವರ್ ಸಮಸ್ಯೆ ಎನ್ನಲಾಗುತ್ತಿದೆ.

ಪ್ರತಿ ತಿಂಗಳು 10-15ನೇ ತಾರಿಖಿಗೆ ಪಡಿತರ ವಿತರಣೆಯಾಗುತ್ತಿತ್ತು. ಆದರೆ ಈ ಬಾರಿ ತಿಂಗಳು ಕಳೆಯುವುದಕ್ಕೆ ಬಂದರೂ ಶೇಕಡ 5-10 ರಷ್ಟು ಮಾತ್ರ ವಿತರಣೆಯಾಗಿದೆ. ರಾಜ್ಯ ಸರ್ಕಾರದ ಸುಮಾರು 30 ಇಲಾಖೆಗಳು ಆಡಳಿತ ದೃಷ್ಟಿಯಿಂದ ಒಂದೇ ವೆಬ್ಸೈಟ್ ಬಳಕೆ ಮಾಡುತ್ತಿದ್ದವು. ಇದರಿಂದ ಸಮಸ್ಯೆಯಾಗುತ್ತಿದ್ದ ಕಾರಣ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ತನ್ನದೇ ಆದ ಪ್ರತ್ಯೇಕ ತಂತ್ರಾಂಶವನ್ಬು ತೆರೆದಿತ್ತು.ವಾದರಿಂದಾನೇ ಆಹಾರ ಧಾನ್ಯ ಸರಬರಾಜು ಮಾಡಲಾಗುತ್ತಿತ್ತು. ಈ ಮೊದಲು ಪಡಿತರ ನೀಡುವಾಗ ಒಟಿಪಿ ಪಡೆದು ವಿತರಣೆ ಮಾಡಲಾಗುತ್ತಿತ್ತು. ಅದು ಫಾಸ್ಟ್ ಆಗಿ ವರ್ಕ್ ಆಗ್ತಾ ಇತ್ತು. ಈಗ ಬೆರಳು ಇಟ್ಟು ಪಡಿತರ ವಿತರಣೆ ಮಾಡುತ್ತಿದೆ. ಇದರಿಂದ ಸಾಕಷ್ಟು ಸರ್ವರ್ ಸಮಸ್ಯೆ ಎದುರಿಸುವಂತೆ ಆಗಿದೆ.

ಮಳೆ ಬೇರೆ ನಿಲ್ಲದೆ ಕಾಡುತ್ತಿದೆ. ಪಡಿತರ ತರಲು ಹೋದವರು ಮಳೆಯಲ್ಲಿಯೇ ನಿಂತು ಕಾಯಬೇಕಾದ ಸ್ಥಿತಿ ಎದುರಾಗಿದೆ. ಸರ್ವರ್ ಸಮಸ್ಯೆಯಿಂದ ಧಾರವಾಡ, ಬಳ್ಳಾರಿ, ಹಾವೇರಿ, ಚಾಮರಾಜನಗರ, ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬಕ್ಕೂ ಪಡಿತರ ಸಿಗುವುದು ಅನುನಾನವಾಗಿದೆ. ಬೆಂಗಳೂರು ಹಾಗೂ ಗ್ರಾಮಾಂತರ ಭಾಗದಲ್ಲಿ ಪಡಿತರ ಹಂಚಿಕೆ ನಿಧಾನಗತಿಯಲ್ಲಿ ಸಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಮಾದಿಗ ಮಹಾಸಭಾ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಮಾದಿಗ ಮಹಾಸಭಾದವರು ಜಾಲಿಕಟ್ಟೆ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ತಮಟೆ ಬಾರಿಸುತ್ತ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ

error: Content is protected !!