ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26 : ತಾಲ್ಲೂಕು ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ಕೋಟೆನಾಡಿನ ಕೋಗಿಲೆಗಳು – ಕನ್ನಡ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಲಾಗಿದೆ.
ವಿ.ಎಲ್.ಪ್ರಶಾಂತ ತಾಲ್ಲೂಕು ಕಸಾಪ ನೂತನ ಅಧ್ಯಕ್ಷರಾಗಿ ಪದಗ್ರಹಣ ನಡೆಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಕರೋಕೆ ಗಾಯನದ ತೀರ್ಪುಗಾರರಾಗಿ ದಾವಣಗೆರೆ ಸರಕಾರಿ ಆಸ್ಪತ್ರೆಯ ನಿವೃತ್ತ ನೇತ್ರ ತಜ್ಞ ಹಾಗೂ ಗಾಯಕರಾದ ಬಿ.ಎ.ಸೀತಾರಂ ಹಾಗೂ ಸಂಗೀತ ಶಿಕ್ಷಕ ಸಿದ್ದಪ್ಪ ನಿಲುವಂಜಿ ಭಾಗವಹಿಲಿದ್ದಾರೆ. ಚಿತ್ರದುರ್ಗ ಜಿಲ್ಲೆಯ 30 ಗಾಯಕರು ಕರೋಕೆ ಗಾಯನ ಪ್ರಸ್ತುತಪಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಭಾಗಹಿಸುವಂತೆ ಕಸಾಪ ಜಿಲ್ಲಾಧ್ಯಕ್ಷ
ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















