Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಗ್ಗಾವಿ ಬೈಎಲೆಕ್ಷನ್ : ಕಾಂಗ್ರೆಸ್ ನಿಂದ ಇಬ್ಬರು ಬಂಡಾಯ : ಸಿದ್ದರಾಮಯ್ಯ ಮಾತಿನಿಂದ ನಾಮಪತ್ರ ವಾಪಾಸ್ ಪಡೆಯುತ್ತಾರಾ..?

Facebook
Twitter
Telegram
WhatsApp

 

ಹಾವೇರಿ: ರಾಜ್ಯದಲ್ಲಿ ಉಪಚುನಾವಣೆಯ ಬಿಸಿ ಎಷ್ಟಿದೆ ಅಂದರೆ ಮಳೆಗಾಲದಲ್ಲೂ ರಾಜಕಾರಣಿಗಳು ಬೆವರುತ್ತಿದ್ದಾರೆ. ಮೂರು ಕ್ಷೇತ್ರದಲ್ಲೂ ಜನರ ಮನಸ್ಸನ್ನು ಗೆಲ್ಲಲು ಓಡಾಟ ಶುರು ಮಾಡಿದ್ದಾರೆ. ಶಿಗ್ಗಾಂವಿ ಉಪಚುನಾವಣಾ ಕ್ಷೇತ್ರ ಕೂಡ ಈಗ ಗಮನ ಸೆಳೆಯುತ್ತಿದೆ. ಇಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ ಯಾಸಿರ್ ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಕ್ಷೇತ್ರದಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಹಣಿ ಏರ್ಪಟ್ಟಿದೆ.

ಇದರ ನಡುವೆ ಕಾಂಗ್ರೆಸ್ ನಿಂದಾನೇ ಬಂಡಾಯವೆದ್ದಿದ್ದಾರೆ. ಯಾಸಿರ್ ಗೆ ಟಿಕೆಟ್ ಕೊಟ್ಟಿದ್ದನ್ನು ಕಾಂಗ್ರೆಸ್ ನ ಹಲವರು ವಿರೋಧಿಸಿದ್ದಾರೆ. ಹೀಗಾಗಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಕಾಂಗ್ರೆಸ್ ಗೆ ದೊಡ್ಡ ತಲೆನೋವಾಗಿದೆ. ಈಗ ಪಕ್ಷ ಗೆಲ್ಲುವುದು ಬಹಳ ಮುಖ್ಯ. ಹೀಗಾಗಿ ಬಂಡಾಯ, ಮಾನಸ್ತಾಪ ಶಮನಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ನೇರವಾಗಿ ಧುಮುಕಿದ್ದಾರೆ.

ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಆದರೆ ಈ ವೇಳೆ ಖಾದ್ರಿ ಅವರ ಬೇಡಿಕೆಗೆ ಸಿದ್ದರಾಮಯ್ಯ ಅವರು ಒಪ್ಪಿಲ್ಲ. ನಾಮಪತ್ರ ವಾಪಸ್ ಪಡೆಯಲು ಖಾದ್ರಿ ಅವರು ಒಪ್ಪಿಲ್ಲ ಎಂಬುದು ಮೂಲಗಳಿಂದ ಬಂದ ಮಾಹಿತಿಯಾಗಿದೆ. ಈಗ ಖಾದ್ರಿ ಅವರ ಮನವೊಲಿಕೆ ಮಾಡುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರ ಮೇಲೆ ಬಿಟ್ಟಿದ್ದಾರೆ ಎನ್ನಲಾಗಿದೆ. ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಅಕ್ಟೋಬರ್ 30 ಕಡೆಯ ದಿನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!