Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

Facebook
Twitter
Telegram
WhatsApp

ಚಿತ್ರದುರ್ಗ . ಅ.26: ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸಂಬಂದ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.

ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ಪೌರಾಯಕ್ತೆ ಎಂ.ರೇಣುಕಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜಕೀಯ ಪಕ್ಷಗಳ ಸಭೆ ನಡೆಸಿ, ಕರಡು ಮತದಾರರ ಪಟ್ಟಿ ಪ್ರಚುರ ಪಡಿಸಿ, ಚುನಾವಣಾ ವೇಳಾಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಯಿತು.

ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಭರಮಸಾಗರ ಗ್ರಾಮಪಂಚಾಯಿತಿ ಭರಮಸಾಗರ-4 ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಹಿರೇಗುಂಟನೂರು ಗ್ರಾಮ ಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರ ಸಾಮಾನ್ಯ, ಜಂಪಣ್ಣನಾಯಕನಕೋಟೆ ಗ್ರಾಮ ಪಂಚಾಯಿತಿಯ ಜಂಪಣ್ಣನಾಯಕನಕೋಟೆ-1 ಕ್ಷೇತ್ರಕ್ಕೆ ಸಾಮಾನ್ಯ(ಮಹಿಳೆ) ಹಾಗೂ ಚಿತ್ರದುರ್ಗ ನಗರಸಭೆ ವಾರ್ಡ್ ಸಂಖ್ಯೆ-15ರ ಕ್ಷೇತ್ರಕ್ಕೆ ಹಿಂದುಳಿದ ವರ್ಗ (ಎ) ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.

*ನಗರಸಭೆ ಚುನಾವಣೆ ನಾಮಪತ್ರ ಸಲ್ಲಿಕೆ*: ಚುನಾವಣಾಧಿಕಾರಿಗಳ ಕಚೇರಿ ನಗರಸಭೆ ಕಾರ್ಯಾಲಯ, ಬಿ.ಡಿ.ರೋಡ್‌, ಚಿತ್ರದುರ್ಗ ನಗರ ಇಲ್ಲಿ ಚುನಾವಣೆ ನಾಮ ಪತ್ರ ಸಲ್ಲಿಕೆ ನಡೆಯಲಿದ್ದು, 2024ರ ನವೆಂಬರ್ 04ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸುವರು. ನ.11 ನಾಮ ಪತ್ರ ಸಲ್ಲಿಕೆ ಕೊನೆಯ ದಿನ, ನ.12ರಂದು ನಾಮಪತ್ರಗಳನ್ನು ಪರಿಶೀಲನೆ, ನ.14 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23ರಂದು ಚುನಾವಣೆ ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

*ಗ್ರಾಮ ಪಂಚಾಯಿತಿ ನಾಮಪತ್ರ ಸಲ್ಲಿಕೆ:* ಸಂಬಂದಪಟ್ಟ ಗ್ರಾಮ ಪಂಚಾಯಿತಿಗಳು ಚುನಾವಣಾಧಿಕಾರಿಗಳ ಕಚೇರಿ ಆಗಿರುತ್ತವೆ. 2024 ರ ನ.06ರಂದು ಚುನಾವಣೆ ನಾಮ ಪತ್ರ ಸಲ್ಲಿಕೆ ನಡೆಯಲಿದೆ. ನ.12 ನಾಮ ಪತ್ರ ಸಲ್ಲಿಕೆ ಕೊನೆಯ ದಿನ. ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದು ವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23 ರಂದು ಚುನಾವಣೆ ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!