Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಪಟ್ಟಣ ಉಪಕದನದಲ್ಲಿ ಮುಸ್ಲಿಂ ಮತಕ್ಕಾಗಿ ನಡಿತಿದ್ಯಾ ದಳಪತಿಗಳು ಹಾಗೂ ಸಿಪಿವೈ ನಡುವೆ ತಂತ್ರ-ರಣತಂತ್ರ..?

Facebook
Twitter
Telegram
WhatsApp

ಚನ್ನಪಟ್ಟಣ: ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ಹೆವಿ ಹೈಪ್ ಕ್ರಿಯೇಟ್ ಮಾಡಿರುವ ಕ್ಷೇತ್ರವಾಗಿದೆ. ಸಿಪಿ ಯೋಗೀಶ್ವರ್ ರನ್ನ ಕಾಂಗ್ರೆಸ್ ಗೆ ಕರೆತಂದಿರೋ ಡಿಕೆ ಬ್ರದರ್ಸ್ ಗೂ ಗೆಲುವು ಮುಖ್ಯವಾದರೆ, ಅತ್ತ ಸಿಪಿ ಯೋಗೀಶ್ವರ್ ವಿರುದ್ಧ ಪಣ ತೊಟ್ಟಿರುವ ದಳಪತಿಗಳಿಗೆ ಗೆಲುವು ಬಹಳ ಮುಖ್ಯವಾಗಿದೆ. ಈಗ ಸಿಪಿ ಯೋಗೀಶ್ವರ್ ಎದುರು ನಿಖಿಲ್ ಅವರನ್ನು ಗೆಲ್ಲಿಸಲು ಕುಮಾರಸ್ವಾಮಿ ಮತಗಳ ಎಣಿಕೆ ಶುರು ಮಾಡಿದ್ದಾರೆ. ಮುಸ್ಲಿಂ ಮತಗಳನ್ನು ಸೆಳೆಯಲು ಪ್ಲ್ಯಾನ್ ಮಾಡಿದ್ದಾರೆ. ಸಿಪಿ ಯೋಗೀಶ್ವ್ ಕೂಡ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದಾರೆ.

ಚನ್ನಪಟ್ಟಣ ಭಾಗದಲ್ಲಿ ಅತಿ ಹೆಚ್ಚು ಒಕ್ಕಲಿಗ ಮತಗಳೇ ಇರುವ ಕಾರಣ, ಕುಮಾರಸ್ವಾಮಿಗೆ ಗೆಲುವು ಒಲಿದಿತ್ತು. ಇದೀಗ ಅದೇ ಭರವಸೆಯ ಮೇಲೆ ಮಗನನ್ನು ನಿಲ್ಲಿಸಿದ್ದಾರೆ. ಆದರೆ ಬೇರೆ ಬೇರೆ ಸಮುದಾಯಗಳ, ಜಾತಿಗಳ ಮತಗಳು ಬಹಳ ಮುಖ್ಯವಾಗಿ ಬೇಕಾಗುತ್ತದೆ. ಚನ್ನಪಟ್ಟಣದಲ್ಲಿ ಒಟ್ಟು 2,32,375 ಮತಗಳಿವೆ. ಅದರಲ್ಲಿ 1.5 ಲಕ್ಷ ಒಕ್ಕಲಿಗ ಮತಗಳಿದ್ದರೆ, 40 ಸಾವಿರ ಪರಿಶಿಷ್ಟ ಪಂಗಡದವರಿದ್ದಾರೆ. ಇನ್ನು 32 ಸಾವಿರ ಮುಸ್ಲಿಂ ಮತಗಳು ಇದಾವೆ. ಈ ಮತಗಳನ್ನು ನೆಗ್ಲೆಕ್ಟ್ ಮಾಡುವ ಹಾಗಿಲ್ಲ. ಹೀಗಾಗಿ ಕುಮಾರಸ್ವಾಮಿ ಈಗ ಮುಸ್ಲಿಂರ ಓಲೈಕೆ ಮಾಡಲು ಶುರು ಮಾಡಿದ್ದಾರೆ. ಕೆಲ ಮುಸ್ಲಿಂ ಮುಖಂಡರು ಈಗಾಗಲೇ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುತ್ತೇವೆ ಎಂದಿದ್ದಾರೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಸೈನಿಕ ಫುಲ್ ಅಲರ್ಟ್ ಆಗಿದ್ದು, ಚನ್ನಪಟ್ಟಣದ ತಮ್ಮ ಸ್ವಗೃಹದಲ್ಲಿ ಮುಸ್ಲಿಂ ಮುಖಂಡರ ಸಭೆ ಕರೆದಿದ್ದಾರೆ. ಬೆಂಬಲವನ್ನು ಕೋರಿದ್ದಾರೆ. ಅತ್ತ ಕುಮಾರಸ್ವಾಮಿ ಅವರು ಮಾತ್ರ ಎಲ್ಲಾ ಶಾಸಕರಿಗೂ ಪಂಚಾಯ್ತಿ ಮಟ್ಟದಿಂದ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!