Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಸದಸ್ಯತ್ವ ಅಭಿಯಾನ : ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ಸೇರಿಸಿ : ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 27 : ಭಾರತೀಯ ಜನತಾ ಪಾರ್ಟಿ ದೇಶದಲ್ಲಿ 11 ಕೋಟಿ, ಕರ್ನಾಟಕ ರಾಜ್ಯದಲ್ಲಿ 60 ಲಕ್ಷ ಸದಸ್ಯರನ್ನು ಹೊಂದಿದೆ ಸದಸ್ಯತ್ವ ಮಾಡಲು ಇನ್ನು ಮೂರು ಇದೆ ಕಾಲವಾಕಾಶ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯರನ್ನಾಗಿ ಮಾಡುವಂತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ನಡೆದ ಸಕ್ರಿಯ ಸದಸ್ಯರ ಅಭಿಯಾನದಲ್ಲಿ ಅರ್ಜಿಯನ್ನು ತುಂಬುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರದುರ್ಗ ನಗರದ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತ್‍ನಲ್ಲಿಯೂ ಮೂರು ಜನ ಸಕ್ರಿಯ ಕಾರ್ಯಕರ್ತರು ಇರಬೇಕಿದೆ ಯಾವ ಕಾರ್ಯಕರ್ತ ತನ್ನ ಬೂತ್ ನಲ್ಲಿ 50 ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡುತ್ತಾರೋ ಅಂತಹರು ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗುತ್ತಾರೆ. ಇವರು ಮುಂದಿನ ದಿನದಲ್ಲಿ ಪಕ್ಷದ ವಿವಿಧ ರೀತಿಯ ಹುದ್ದೆಗಳನ್ನು ಅಲಂಕರಿಸಲು ಇದು ಸಹಾಯವಾಗುತ್ತದೆ ಎಂದರು.

ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ನಮ್ಮದಾಗಬೇಕಿದೆ ಇದಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರರು ಈ ದಿನದಲ್ಲಿ ಹೆಚ್ಚಿನ ಶ್ರಮವನ್ನು ಹಾಕುವುದರ ಮೂಲಕ ಸದಸ್ಯರನ್ನು ಮಾಡಬೇಕಿದೆ, ಇದು ಮುಂದಿನ ದಿನದಲ್ಲಿ ಬರುವ ಜಿಲ್ಲಾ.ತಾಲ್ಲೂಕು ಪಂಚಾಯಿತಿಗಳಿಗೆ ಅನುಕೂಲವಾಗಲಿದೆ. ಈ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು ಇದಕ್ಕೆ ಈಗಿನಿಂದಲೇ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಎಂದು ತಿಪ್ಪಾರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ವಕ್ತಾರ ನಾಗರಾಜ್ ಬೇದ್ರೇ, ಯುವ ಮೋರ್ಚಾದ ಅಧ್ಯಕ್ಷ ರಾಮು, ಹೆಚ್.ಎನ್. ಲೋಕೇಶ್ ಕುಮಾರ್, ಬಸಮ್ಮ, ಶಾಂತಮ್ಮ, ಕಿರಣ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!