Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರವರ್ಗ 3ಕ್ಕೆ ಸೇರಿಸಿದ್ದು ಒಳ್ಳೆಯದಲ್ಲ : ಹಳ್ಳಿಕಾರ್ ಸಮುದಾಯಕ್ಕೆ ಸಿಎಂ ಗುಡ್ ನ್ಯೂಸ್

---Advertisement---

ಬೆಂಗಳೂರು: ಇಂದು ರಾಜ್ಯ ಹಳ್ಳಿಕಾರ್ ಸಂಘ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿಯೇ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದ್ದಾರೆ. ಈಗಾಗಲೇ ಪ್ರವರ್ಗ 3ಕ್ಕೆ ಸೇರಿಸಲಾಗಿದೆ. ಆದರೆ ಅದು ಸರಿ ಅಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.

 

ನನಗೆ ಹಳ್ಳಿಕಾರ್ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ್ ಸಮುದಾಯವನ್ನು ಪ್ರವರ್ಗ 3ಕ್ಕೆ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಮೊದಲಿನಿಂದಾನೂ ಇದೆ. ಈ ಸಂಬಂಧ ವರದಿ ತರಿಸಿಕೊಂಡು, ಅದನ್ನು ಸಂಪುರ್ಣವಾಗಿ ನೋಡಿದ ಬಳಿಕ ತೀರ್ಮಾನಿಸುತ್ತೇನೆ. ಹಳ್ಳಿಕಾರ್ ಸಮುದಾಯದ ಬಗ್ಗೆ‌ ಸೂಕ್ತ ತೀರ್ಮಾನವನ್ನೇ ತೆಗೆದುಕೊಳ್ಳುತ್ತೇನೆ. ಸಮಾಜದಲ್ಲಿರುವ ಹಲವು ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು, ಜಾತಿ ಸಮೀಕ್ಷಾ ವರದಿಗಳು ಮುಖ್ಯ. ಆದರೆ ರಾಜ್ಯದಲ್ಲಿ 2011ರ ಜಾತಿಗಣತಿಯೇ ಕೊನೆಯ ಜಾತಿಗಣತಿಯಾಗಿದೆ.

ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡ 10ರಷ್ಟು ಮೀಸಲಾತಿ‌ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ್ ಸಮುದಾಯ ಬರುತ್ತದೆಯಾ ಎಂಬುದನ್ನು ಪರಿಶೀಲಿಸಬೇಕು. ಈ ಸಮುದಾಯವನ್ನು ಪ್ರವರ್ಗ 3A ಗೆ ಸೇರಿಸುವುದು ಸೂಕ್ತವಲ್ಲ. ಹೀಗಾಗಿ ಶಾಶ್ವತ ಹಿಂದುಳಿದ‌ ಸಮುದಾಯಕ್ಕೆ ನಿಮ್ಮ ಬೇಡಿಕೆ ಕಳುಹಿಸಿ. ಅಧ್ಯಯನ ಮಾಡಿ ನಂತರ ವರದಿ ಪಡೆಯಲಾಗುವುದು. ನಂತರದ ದಿನಗಳಲ್ಲಿ ಸಮುದಾಯಕ್ಕೆ ಏನು ಸಿಗಬೇಕು ಎಂಬುದನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರ ಮಾತು ಕೇಳಿದ ಹಳ್ಳಿಕಾರ್ ಸಮುದಾಯಕ್ಕೆ ಖುಷಿ‌ ಸಿಕ್ಕಂತೆ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment