Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚನ್ನಪಟ್ಟಣ ಗೆದ್ದರೆ ಇದೇ ಅವಧಿಯಲ್ಲಿ ಡಿಕೆಶಿ ಮುಖ್ಯಮಂತ್ರಿ ಆಗ್ತಾರಾ..?

ಡಿಕೆ ಶಿವಕುಮಾರ್
---Advertisement---

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಬ್ಬರ ಜೋರಾಗಿದೆ. ಈ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 135 ಸೀಟುಗಳನ್ನು ಪಡೆಯುವಲ್ಲಿ ಡಿಕೆ ಶಿವಕುಮಾರ್ ಅವರ ಶ್ರಮ ಸಾಕಷ್ಟಿತ್ತು. ಅದು ಹೈಕಮಾಂಡ್ ಗೂ ಗೊತ್ತಿರುವ ವಿಚಾರ. ಡಿಕೆಶಿ ಸಿಎಂ ಆಗಬೇಕೆಂಬ ಹಂಬಲ ಇಟ್ಟುಕೊಂಡಿದ್ದಾರೆ. ಇದೀಗ ಚನ್ನಪಟ್ಟಣ ಕ್ಷೇತ್ರ ಗೆದ್ದರೆ ಇದೇ ಅವಧಿಯಲ್ಲೇ ಮುಖ್ಯಮಂತ್ರಿಯಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ.

 

ಅದಕ್ಕೆ ಪೂರಕವಾಗಿ ಮಾನಿ ಶಾಸಕ ಎಂಸಿ ಅಶ್ವತ್ಥ್ ಅವರು ಸಭೆಯೊಂದನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಚನ್ನಪಟ್ಟಣದಲ್ಲಿ ಸಿಪಿ ಯೋಗೀಶ್ವರ್ ಅವರನ್ನು ಗೆಲ್ಲಿಸುವ ಮೂಲಕ ಇದೇ ಅವಧಿಯಲ್ಲೇ ಇಕ್ಕಲಿಗ ನಾಯಕರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಕ್ಕೆ ಮತದಾರರು ಆಶೀರ್ವದಿಸಬೇಕು. ಇಲ್ಲಿ ಪಕ್ಷ ಗೆದ್ದರೆ ಇದೇ ಅವಧಿಯಲ್ಲೆ ಡಿಕೆ ಶಿವಕುಮಾರ್ ಸಿಎಂ ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ಕ್ಷೇತ್ರದಲ್ಲಿ ಯೋಗೀಶ್ವರ್ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಅವರಿಗೆ ಚನ್ನಪಟ್ಟಣ ಗೆಲ್ಲಲೇಬೇಕಾಗಿದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಡಿಕೆ ಸುರೇಶ್ ತೆಗೆದುಕೊಂಡಿದ್ದಾರೆ. ಅಣ್ಣನ ಪ್ರತಿಷ್ಠೆಯನ್ನು ಡಿಕೆ ಸುರೇಶ್ ಎತಚತಿ ಹಿಡಿಯಲೇಬೇಕಿದೆ. ಇನ್ನು ಡಿಕೆ ಶಿವಕುಮಾರ್ ಅವರು ಕಾರ್ಯಕರ್ತರಿಗೆ ಕರೆಯೊಂದನ್ನು ನೀಡಿದ್ದಾರೆ. ಈ ಹಿಂದೆ ನಡೆದ ಕಹಿ ಘಟನೆಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಡಿ. ಬದಲಿಗೆ ಪಕ್ಷ ಸಂಘಟನೆ, ಹೆಚ್ಚು ಮತ ಸೆಳೆಯಲು ಹಾಗೇ ಚನ್ನಪಟಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮ ಹಾಕಿ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕಿದೆ. ಹೀಗಾಗಿ ಸಿಪಿ ಯೋಗೀಶ್ವರ್ ಹೆಲುವಿಗಾಗಿ ಹೋರಾಡೋಣಾ ಎಂದು ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment