Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

Facebook
Twitter
Telegram
WhatsApp

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ಕೂಡ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ವೇಳೆ ತಾಯಿಯ ಆಶೀರ್ವಾದ ಸಿಕ್ಕಿದೆ ಎನ್ನಲಾಗಿದೆ. ಸಿದ್ದೇಶ್ವರ ಸ್ವಾಮಿಗಳು ಹೂ ನೀಡುವ ಮೂಲಕ ಶುಭ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕುಮಾರಸ್ವಾಮಿ, ಪತ್ನಿ, ಸೊಸೆ,‌ ಮೊಮ್ಮಗನ ಜೊತೆಗೆ ಹಾಸನಾಂಬೆಯ ದರ್ಶನ ಮಾಡಿ ಬಳಿಕ ಸಿದ್ದೇಶ್ವರ ಸ್ವಾಮಿಗಳ ದರ್ಶನಕ್ಕೆ ಬಂದಿದ್ದರು. ಈ ವೇಳೆ ಪೂಜಾರಿಗಳು ಪೂಜೆ ಸಲ್ಲಿಸುವಾಗ ದೇವರು ಮೂರು ಹೂ ನೀಡಿದ್ದಾನೆ. ಇದನ್ನು ಕಂಡ ಅನಿತಾ ಕುಮಾರಸ್ವಾಮಿ ತುಂಬಾನೇ ಖುಷಿ ಪಟ್ಟಿದ್ದಾರೆ. ದೇವರ ಮೇಲಿಂದ ಅದರಲ್ಲೂ ಬಲಗಡೆ ಭಾಗದಿಂದ ಹೂ ಬಿದ್ದಿದೆ. ಇದನ್ಮು ಅನಿತಾ ಅವರು ನೋಡಿದ್ದು, ಕುಮಾರಸ್ವಾಮಿ ಅವರಿಗೂ ತೋರಿಸಿದ್ದಾರೆ. ಮಗನ ಗೆಲುವಿಗಾಗಿ ಬೇಡಿಕೊಳ್ಳುತ್ತಿದ್ದ ಕುಟುಂಬಕ್ಕೆ ದೇವರು ವರಕೊಟ್ಟಂತೆ ಆಗಿದೆ.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಗಟ್ಟಿ ನಿರ್ಧಾರ ಮಾಡಿ, ಬಿಜೆಪಿ ನಾಯಕರ ಜೊತೆಗೂ ಚರ್ಚಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಖಾಡಕ್ಕೆ ಇಳಿಸಿದ್ದಾರೆ. ಸಿಪಿ ಯೋಗೀಶ್ವರ್ ಎದುರು ನಿಖಿಲ್ ಹೋರಾಡಲೇಬೇಕಿದೆ. ಎರಡು ಬಾರಿ ಸೋತಿರುವ ನಿಖಿಲ್ ಮೂರನೆ ಬಾರಿಗೆ ಗೆಲ್ಲುವ ಎಲ್ಲಾ‌ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಕುಟುಂಬ ಇಂದು ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಧಾರ್ ಬಳಕೆದಾರರಿಗೆ ಗುಡ್ ನ್ಯೂಸ್ : ಹೊಸ ಅಪ್ಡೇಟ್ : ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ!

ಸುದ್ದಿಒನ್ : ಭಾರತದಾದ್ಯಂತ ಜನರಿಗೆ ಆಧಾರ್ ಕಾರ್ಡ್ ಸಂಬಂಧಿತ ಸೇವೆಗಳನ್ನು ಒದಗಿಸಲು ಸರ್ಕಾರವು ದೇಶಾದ್ಯಂತ ಒಟ್ಟು 13,352 ಆಧಾರ್ ನೋಂದಣಿ ಮತ್ತು ನವೀಕರಣ ಕೇಂದ್ರಗಳನ್ನು ಸ್ಥಾಪಿಸಿದೆ. ಆಧಾರ್ ಕಾರ್ಡ್ ಅನ್ನು ನವೀಕರಿಸುವಲ್ಲಿ ಜನರು ನಿರಂತರವಾಗಿ

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

error: Content is protected !!