Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿ ಜಾರಿಗೆ ಸಮ್ಮತಿ : ಸಿಎಂ ನಿರ್ಧಾರಕ್ಕೆ ಮಾಜಿ ಸಚಿವ ಆಂಜನೇಯ ಸಂತಸ

---Advertisement---

 

 

ಚಿತ್ರದುರ್ಗ:ಅ.28 : ಪರಿಶಿಷ್ಟ ಜಾತಿಯಲ್ಲಿ ನೂರಾರು ಸಮುದಾಯಗಳ ಮಧ್ಯೆ ಪೈಪೋಟಿ ನಡೆಸಿ ಮೀಸಲಾತಿ ಪಡೆಯುವಲ್ಲಿ ಮಾದಿಗ ಸಮುದಾಯ ವಿಫಲವಾಗಿದ್ದು, ಒಳಮೀಸಲಾತಿ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂಬ ಸಮುದಾಯದ ಕೂಗಿಗೆ ಸಿಎಂ ಸಿದ್ದರಾಮಯ್ಯ ಧ್ವನಿಯಾಗಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದಾಶಿವ ಆಯೋಗ ರಚಿಸಿದ್ದ ಕಾಂಗ್ರೆಸ್ ಪಕ್ಷ, ಚುನಾವಣಾ ಪ್ರಣಾಳಿಕೆಯಲ್ಲೂ ಒಳಮೀಸಲಾತಿ ಜಾರಿಗೆ ಬದ್ಧ ಎಂದು ಘೋಷಿಸಿತ್ತು. ಆದರೆ, ಕಾನೂನು ತೊಡಕು ಅಡ್ಡಿಯಾಗಿತ್ತು ಎಂದಿದ್ದಾರೆ. ಮೂರು ದಶಕಗಳ ಕಾಲ ಸಮುದಾಯದ ನಾಯಕರು, ಸಂಘಟನೆಗಳು ನಡೆಸಿದ ಹೋರಾಟದ ಫಲ ಸುಪ್ರೀಂ ಕೋರ್ಟ್ ತೀರ್ಪು ಮರುಜೀವ ನೀಡಿತ್ತು. ಅದನ್ನು ಅನುಷ್ಠಾನಗೊಳಿಸುವಲ್ಲಿ ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸೋಮವಾರ ಸಮ್ಮತಿ ವ್ಯಕ್ತಪಡಿಸಿದ್ದು, ಈ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಲು ಸಿದ್ದರಾಮಯ್ಯ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳೊಳಗೆ ದತ್ತಾಂಶದ ವರದಿ ತರಿಸಿಕೊಂಡು ಒಳಮೀಸಲಾತಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜತೆಗೆ ಸರ್ಕಾರಿ ಉದ್ಯೋಗ ನೇಮಕಾತಿಗೆ ತಡೆ ಹಾಕಿರುವುದು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ ಎಂದಿದ್ದಾರೆ.

ಕೆಪಿಎಸ್ಸಿ ಸೇರಿ ಎಲ್ಲ ರೀತಿಯ ನೇಮಕಾತಿಗಳ ಪ್ರಕ್ರಿಯೆಗೆ ತಡೆ ಹಾಕುವ ಜತೆಗೆ ಎಸ್‍ಸಿಎಸ್‍ಪಿ, ಟಿಎಸ್‍ಪಿ ಹಣ ಹಂಚಿಕೆಗೂ ತಡೆ ಹಾಕುವ ನಿರ್ಧಾರ ಕೈಗೊಳ್ಳಬೇಕು. ಮುಖ್ಯವಾಗಿ ಮೂರು ತಿಂಗಳೊಳಗೆ ವರದಿ ತರಿಸಿಕೊಂಡು, 4ನೇ ತಿಂಗಳಲ್ಲಿ ಒಳಮೀಸಲಾತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಆಗದಂತೆ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಜತೆಗೆ ಈ ಅವಧಿಯಲ್ಲಿ ಯಾವುದೇ ಸರ್ಕಾರಿ ನೇಮಕಾತಿ ಆಗದ ಕಾರಣಕ್ಕೆ ವಯಸ್ಸಿನ ಮೀತಿಯನ್ನು ನಾಲ್ಕು ತಿಂಗಳು ಸಡಿಲಗೊಳಿಸಿ, ಎಲ್ಲ ವರ್ಗದ ವಿದ್ಯಾವಂತರಿಗೆ ನ್ಯಾಯ ಕಲ್ಪಿಸಬೇಕು. ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ಸಹಸ್ರಾರು ಮಂದಿ, ಹತ್ತಾರು ಸಂಘಟನೆಗಳು ಹೋರಾಟ ನಡೆಸಿದ್ದು, ಅವರೆಲ್ಲರ ಆಶಯದಂತೆ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಕಲ್ಪಿಸಲು ಕ್ರಮಕೈಗೊಂಡಿರುವ ನಿರ್ಧಾರ ಸ್ವಾಗತರ್ಹ ಎಂದು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment