Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನಿಶಾನಿ ಜಯಣ್ಣ ಅವರಿಗೆ ಸನ್ಮಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 29 : ನಗರದ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ ಹಾಗೂ ಎಬಿಸಿ ಅನ್ವರ್ ಪಾಶಾ ಗೆಳೆಯರ ಬಳಗದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಚಿತ್ರದುರ್ಗ ಟೌನ್ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ. ನಿಶಾನಿ ಜಯಣ್ಣ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚೆಗೆ ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಎಂ. ನಿಶಾನಿ ಜಯಣ್ಣ ಅವರು ಸತತ ಮೂರನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಟೌನ್ ಕೋಪರೇಟಿವ್ ಸೊಸೈಟಿಯ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿಶಾನಿ ಜಯಣ್ಣ ಅವರು ಜಿಲ್ಲೆಯ ಜನರ ಹಾಗೂ ಸಹಕಾರ ಕ್ಷೇತ್ರದ ಬಂಧುಗಳ ಸಹಕಾರದಿಂದ ಎಲ್ಲವೂ ಸಾಧ್ಯವಾಗಿದೆ ಎಂದರು. ಶುಭ ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಬಿಸಿ ಬುಕ್ ಹೌಸ್ ಮಾಲೀಕ ಅನ್ವರ್ ಪಾಶಾ, ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ, ಶಿಕ್ಷಕರಾದ ಎಂ ವಿಶ್ವನಾಥ್, ಪಿ.ವೈ ದೇವರಾಜ್ ಪ್ರಸಾದ್, ಉಪನ್ಯಾಸಕ ಶ್ರೀನಿವಾಸ್, ಸಾಂತ್ವನ ಶಂಕರಪ್ಪ, ಓಂಕಾರ ಪ್ರೆಸ್ ರಮೇಶ್, ಓಬಣ್ಣ, ನಿಶಾನಿ ನೀಲಪ್ಪ, ಯಶವಂತ್, ಇರ್ಫಾನ್, ಭರತ್ ಹಾಗೂ ಚಿತ್ರದುರ್ಗ ಟೌನ್ ಕೋಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...