Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅಕ್ಟೋಬರ್ 31 ರಂದು ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕ ಪ್ರದರ್ಶನ : ಶಿವು ಯಾದವ್ ಮಾಹಿತಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 29 : ಜಿಲ್ಲಾ ವಕೀಲರ ಸಂಘ, ವಕೀಲರ ಬಳಗದ ಸಂಯುಕ್ತಾಶ್ರಯದಲ್ಲಿ ನ್ಯಾಯಾಲಯದ ಮುಂಭಾಗದಲ್ಲಿ ರಾಜವೀರ ಮದಕರಿ ನಾಯಕ ನಾಟಕ ಪ್ರದರ್ಶನವನ್ನು ಅಕ್ಟೋಬರ್ 31 ರ ರಾತ್ರಿ 7ಕ್ಕೆ ಹಮ್ಮಿಕೊಳ್ಳಲಾಗಿದೆ.

ಎರಡು ತಿಂಗಳಿಗೂ ಹೆಚ್ಚು ಕಾಲ ವಕೀಲರ ಸಂಘದ ಕಚೇರಿಯಲ್ಲಿ ತರಬೇತಿ ನಡೆಸಿದ್ದ ವಕೀಲರು, ಅ.12ರಂದು ನಾಟಕ ಪ್ರದರ್ಶನ ಆಯೋಜಿಸಿದ್ದರು. ಆದರೆ, ಮಳೆ ಹೆಚ್ಚಾಗಿದ್ದರಿಂದ ಅಕ್ಟೋಬರ್ 31ರಂದು ಮುಂದೂಡಲಾಗಿತ್ತು. ಈಗ ನಾಟಕ ಪ್ರದರ್ಶನ ದಿನ ಸಮೀಪಗೊಂಡಿದ್ದು, ತೀವ್ರ ಕುತೂಹಲ ಮೂಡಿಸಿದೆ. ಪ್ರತಿನಿತ್ಯ ಕಕ್ಷಿದಾರರ ಪರ ವಕಾಲತ್ತು ವಹಿಸಿ, ನ್ಯಾಯಕೊಡಿಸುವಲ್ಲಿ ಮಗ್ನರಾಗುತ್ತಿದ್ದರು. ಆದರೆ, ಮೊದಲ ಬಾರಿಗೆ ಸಾಮಾಜಿಕ ನಾಟಕ ಪ್ರದರ್ಶನ ನಡೆಸಿದ್ದ ವಕೀಲರು, ಮದಕರಿ ಜಯಂತ್ಯುತ್ಸವ ಅಂಗವಾಗಿ ಪ್ರಥಮ ಬಾರಿಗೆ ಐತಿಹಾಸಿಕ ರಾಜವೀರ ಮದಕರಿ ನಾಯಕ ನಾಟಕ ಪ್ರದರ್ಶನಕ್ಕೆ ಸಿದ್ಧತೆಗೊಂಡಿದೆ.

ನಾಟಕ ಪ್ರದರ್ಶನಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಟಿ.ವೆಂಕಟೇಶ್ ಚಾಲನೆ ನೀಡಿದ್ದು, ಜಿಲ್ಲಾ ಪ್ರಧಾನ ನ್ಯಾಯಾಧೀಶ ರೋಣ್ ವಾಸುದೇವ್, ಸಹಾಯಕ ಜಿಲ್ಲಾ ನ್ಯಾಯಾಧೀಶ ಎಸ್.ಎನ್.ಕಲ್ಕಣಿ, ಸಿ.ಎಚ್.ಗಂಗಾಧರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ರಾಜ್ಯ ವಕೀಲ ಪರಿಷತ್ತಿನ ಸದಸ್ಯರಾದ ಗೌತಮ್ ಚಂದ್, ಶ್ರೀನಿವಾಸ್ ಬಾಬು, ರಾಜಣ್ಣ, ದೇವರಾಜು ಭಾಗವಹಿಸಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ನಾಟಕದ ಸಾರಥ್ಯವನ್ನು ವಕೀಲರಾದ ಎನ್.ಶರಣಪ್ಪ ವಹಿಸಲಿದ್ದು, ವ್ಯವಸ್ಥಾಪಕರು ಮತ್ತು ನಿರ್ದೇಶಕರಾಗಿ ಮಾಜಿ ಅಧ್ಯಕ್ಷ ಎಸ್.ವಿಜಯಕುಮಾರ್, ಪಿ.ಆರ್.ವೀರೇಶ್ ನಿರ್ವಹಿಸುತ್ತಾರೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಕೀಲರ ಕಾರ್ಯಕ್ಕೆ ಪ್ರೋತ್ಸಾಹಿಸಬೇಕೆಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಸಿ.ಶಿವುಯಾದವ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment