Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಅಳಿಯ ಆಗುತ್ತಿದ್ದಾರೆ ಚಿತ್ರನಟ ಡಾಲಿ ಧನಂಜಯ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್, ಹ್ಯಾಂಡಸಮ್ ಹಂಕ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ. ಯಾವಾಗ ಮದುವೆ ಅಂತ ಕೇಳುವಾಗೆಲ್ಲ ಅಯ್ಯೋ ಹುಡುಗಿನೇ ಸಿಕ್ಕಿಲ್ಲ ಅಂತಿದ್ದ ಡಾಲಿ ಧನಂಜಯ ಅವರಿಗೆ ಕೊನೆಗೆ ಸಂಗಾತಿ ಸಿಕ್ಕಿದ್ದಾರೆ. ಆಕ್ಟರ್ ಮತ್ತು ಡಾಕ್ಟರ್ ಮದುವೆ ಆಗುತ್ತಿದ್ದಾರೆ.


ಡಾಲಿ ಧನಂಜಯ್ ಅವರ ಕೈ ಹಿಡಿಯೋ ಹುಡುಗಿ ಯಾರು ಎಂಬ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಅವರ ಬಾಳ ಸಂಗಾತಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ. ತಮ್ಮ ಬಾಳ ಸಂಗಾತಿಯನ್ನು ಧನಂಜಯ್ ಅವರು ಪರಿಚಯಿಸಿದ್ದಾರೆ.

ದೀಪಾವಳಿ ಹಬ್ಬಕ್ಕೆ ಧನಂಜಯ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಫೆಬ್ರವರಿ 16ರಂದು ಮದುವೆ ನಡೆಯಲಿದೆ. ವಿಶೇಷ ಎಂದರೆ ಧನಂಜಯ್ ಮದುವೆ ಆಗುತ್ತಿರುವ ಹುಡುಗಿ ಚಿತ್ರರಂಗದವರಲ್ಲ. ಅವರು ವೈದ್ಯರು.
ಚಿತ್ರದುರ್ಗದ ವೈದ್ಯೆ ಡಾ.ಧನ್ಯತಾ ಅವರನ್ನು ಡಾಲಿ ಧನಂಜಯ ವಿವಾಹವಾಗುತ್ತಿದ್ದು, ಈ ಮೂಲಕ ಚಿತ್ರದುರ್ಗದ ಅಳಿಯ ಆಗುತ್ತಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋನ ಅವರು ಹಂಚಿಕೊಂಡಿದ್ದಾರೆ.

ಸ್ತ್ರೀರೋಗ ತಜ್ಞೆ ಆಗಿರುವ ಧನ್ಯತಾ, ಧನಂಜಯ್​ಗೆ ಜೊತೆಯಾಗುತ್ತಿದ್ದಾರೆ. ಡಾಲಿ ಮತ್ತು ಧನ್ಯತಾ ಮಧ್ಯೆ ಅನೇಕ ವರ್ಷಗಳ ಪರಿಚಯ ಇದೆ. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ.

ಧನ್ಯತಾ ಅಪ್ಪಟ ಕನ್ನಡತಿ. ಇವರು ಓದಿದ್ದು ಮೈಸೂರಿನಲ್ಲಿ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ವಿವಾಹ ನೆರವೇರಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗದವರು, ರಾಜಕೀಯ ಕ್ಷೇತ್ರದವರು ಸೇರಿ ಅನೇಕ ಗಣ್ಯರು ಹಾಜರಾಗಲಿದ್ದಾರೆ. ಬೆಳಿಗ್ಗೆ ವಿವಾಹ ನಡೆಯಲಿದ್ದು, ಅದೇ ದಿನ ಅದೇ ವೇದಿಕೆ ಮೇಲೆ ಆರತಕ್ಷತೆ ಸಮಾರಂಭ ಕೂಡ ಜರುಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment