ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

0 Min Read

 

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ನಗರದ ಬಿ.ಎಲ್. ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಧ್ವಜಾರೋಹಣವನ್ನು ಶಾಲೆಯ ಅಧ್ಯಕ್ಷ ರೂಟೇರಿಯನ್ ಪಿ. ಎಚ್.ಎಫ ಎಂ. ಕೆ.ರವೀಂದ್ರ ಅವರು ನೆರವೇರಿಸಿದರು. ಪ್ರಾರ್ಥನೆಯನ್ನು ಕವಿತಾ, ಅನಿಸ್ ಫಾತೀಮಾರ ಅವರು ಸ್ವಾಗತವನ್ನು ಕೋರಿದರು ಮತ್ತು ವಂದನಾರ್ಪಣೆಯನ್ನು ಕಾರ್ಯದರ್ಶಿ ಕಾರ್ತಿಕ್ ಎಂ. ರವರು ನಡೆಸಿಕೊಟ್ಟರು. ಶಾಲೆಯ ಎಲ್ಲಾ ಟ್ರಸ್ಟ್ ಗಳು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಮತ್ತು ಪೋಷಕರಿಗೆ ಸಿಹಿ ಹಂಚಲಾಯಿತು.

Share This Article
Leave a Comment

Leave a Reply

Your email address will not be published. Required fields are marked *