Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರೂ ಮಾಡಬೇಕು : ಜೆ.ಯಾದವರೆಡ್ಡಿ

---Advertisement---

ಸುದ್ದಿಒನ್, ಚಿತ್ರದುರ್ಗ,ನವೆಂಬರ್. 01 : ಕನ್ನಡ ಬದುಕಿನ ಅಸ್ಮಿತೆ, ಭವಿಷ್ಯದ ಭಾಷೆ. ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸಬಾರದು. ಕರ್ನಾಟಕದಲ್ಲಿರುವ ಏಳು ಕೋಟಿ ಜನರು ಕನ್ನಡವನ್ನು ಮಾತನಾಡುವ ಮೂಲಕ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕೆಂದು ನಿವೃತ್ತ ಪ್ರಾಚಾರ್ಯರಾದ ಜೆ.ಯಾದವರೆಡ್ಡಿ ತಿಳಿಸಿದರು.

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ 69 ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡಾಂಭೆಗೆ ನಮಿಸಿ ಮಾತನಾಡಿದರು.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅನೇಕ ಸಾಹಿತಿಗಳು ಕನ್ನಡವನ್ನು ಶ್ರೀಮಂತ ಭಾಷೆಯನ್ನಾಗಿಸಿದ್ದಾರೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿರುವುದು ಕನ್ನಡಕ್ಕೆ ಮಾತ್ರ. ಖಾಸಗಿ ಶಾಲೆಗಳು ಕನ್ನಡವನ್ನು ನಿರ್ಲಕ್ಷಿಸುತ್ತಿರುವುದು ನೋವಿನ ಸಂಗತಿ. ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ನಂತರ ಹಿಂದಿ, ಇಂಗ್ಲಿಷ್ ಕಲಿತರೆ ತಪ್ಪೇನಿಲ್ಲ. ಕನ್ನಡದ ಮೇಲೆ ಅನ್ಯ ಭಾಷೆಯನ್ನು ಹೇರಬಾರದು. ಎಸ್.ನಿಜಲಿಂಗಪ್ಪ, ಜಾಫರ್‍ಷರೀಫ್ ಸೇರಿದಂತೆ ಅನೇಕರು ಈ ಶಾಲೆಯಲ್ಲಿ ಓದಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮದರಸಗಳಲ್ಲಿಯೂ ಕನ್ನಡ ಭಾಷೆ ಕಲಿಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ ಮಾತನಾಡುತ್ತ ದ.ರಾ.ಬೇಂದ್ರೆ, ಕುವೆಂಪು, ಆಲೂರು ವೆಂಕಟರಾಯರು ಸೇರಿದಂತೆ ಅನೇಕ ಮಹನೀಯರು ಕನ್ನಡಕ್ಕಾಗಿ ಹೋರಾಡಿರುವುದರಿಂದ ಇಂದು ನಾವು ನೀವುಗಳೆಲ್ಲರೂ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಪ್ರತಿಯೊಬ್ಬರು ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನವಿಟ್ಟುಕೊಳ್ಳಬೇಕೆಂದರು.

ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಉಪಾಧ್ಯಕ್ಷ ಆದಿಲ್, ಮುಖ್ಯ ಶಿಕ್ಷಕಿ ತಸ್ಮಿಯ ಹಾಗೂ ಶಿಕ್ಷಕ ವೃಂದದವರು ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment