Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಫ್ ವಿವಾದ : ರೈತರಿಗೆ ಕೊಟ್ಟ ನೋಟೀಸ್ ವಾಪಸ್, ಕಂದಾಯ ಇಲಾಖೆಯ ದಾಖಲೆಯೇ ಅಂತಿಮ : ಜಿ.ಪರಮೇಶ್ವರ್ ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ಕಳೆದ ಕೆಲವು ದಿನಗಳಿಂದಾ‌ನೂ ವಕ್ಫ್ ಮಂಡಳಿ ಹಾಗೂ ರೈತರ ನಡುವೆ ಹೋರಾಟ ನಡೆಯುತ್ತಿದೆ. ಜಿಲ್ಲಾಧಿಕಾರಿಗಳ ಮಾತಿನಂತೆ ರೈತರು ಸದ್ಯ ಹೋರಾಟ ಕೈ ಬಿಟ್ಟಿದ್ದಾರೆ. ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ, ವಕ್ಫ್ ಆಸ್ತಿ ವಿವಾದ ಸಂಬಂಧ ರೈತರಿಗೆ ಯಾವ ನೋಟೀಸ್ ಕೊಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅದರಂತೆ ಈಗಾಗಲೇ ನೋಟೀಸ್ ನೀಡಿದ್ದರು ಅದನ್ನು ವಾಪಾಸ್ ತೆಗೆದುಕೊಳ್ಳಲು ತಿಳಿಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನಲ್ಲಿ ಸದ್ಯಕ್ಕೆ ಯಾರಿಗೂ ನೋಟೀಸ್ ಕೊಟ್ಟಿಲ್ಲ. ಇಲ್ಲಿಗೆ ಇದು ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆಯಾಗುತ್ತೆ ಎಂಬುದು ಗೊತ್ತಿಲ್ಲ. ಕಂದಾಯ ಇಲಾಖೆಯ ದಾಖಲಾತಿಗಳು ಹಾಗೂ ವಕ್ಫ್ ದಾಖಲಾತಿಗಳು ಒಂದೇ ರೀತಿ ಇದ್ದಾಗ ಮಾತ್ರ ಗೊಂದಲವಾಗುವುದಿಲ್ಲ. ಕಂದಾಯ ಇಲಾಖೆಯಲ್ಲಿನ ದಾಖಲಾತಿಗಳೇ ಅಂತಿಮ ಎಂದಿದ್ದಾರೆ.

ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಕೆಲಸ ಮಾಡಲ್ಲ ಎಂದಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಬಗ್ಗೆ ರಾಜಕೀಯ ಪುಡಾರಿ ಎಂಬ ಮಾತು ಬಳಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದಸಚಿವ ಪರಮೇಶ್ವರ್, ಈ ಬಗ್ಗೆ ಅಂದಿರೋದು ಗೊತ್ತಿಲ್ಲ. ಆದರೆ ರಾಜಕೀಯ ಪುಡಾರಿ ಅಂದಿದ್ದು ತಪ್ಪಾ..? ಸರಿನಾ..? ನಂಗೆ ಗೊತ್ತಿಲ್ಲ. ನಮ್ಮನ್ನು ಪುಡಾರಿ ಎನ್ನುತ್ತಾರೆ. ಪುಡಾರಿ ಶಬ್ಧ ಬಳಸಿದ್ದು ಸರಿನಾ ಎಂದು ಗೃಹ ಸಚಿವ ಜಿ ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರಿ ಪುಡಾರಿ ಪದ ಬಳಸಿದ್ದಾರೆ ಎಂಬುದಕ್ಕೆ ವಿರೋಧ ವ್ಯಕ್ತವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment