Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸಸಿ ನೆಟ್ಟು ವಿಜಯೇಂದ್ರ ಯಡಿಯೂರಪ್ಪನವರ ಹುಟ್ಟು ಹಬ್ಬ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ,ನವೆಂಬರ್. 05 : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ನಗರದ ಸಿದ್ದಾರ್ಥ ಬಡಾವಣೆಯ ಉದ್ಯಾನವನದಲ್ಲಿ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ, ಋಷಿ ಸಂಸ್ಕೃತಿ ಗುರುಕುಲ ಮಹಾ ಸಂಸ್ಥಾನ ಅವರ ಸಹಯೋಗದೊಂದಿಗೆ ಬಿಜೆಪಿ ಮುಖಂಡರಾದ ಜಿಎಸ್ ಅನಿತ್ ಕುಮಾರ್ ಅವರ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಿಎಸ್ ಅನಿತ್ ಕುಮಾರ್ ಮಾತನಾಡಿ, ಇಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಯೆಡಿಯೂರಪ್ಪನವರ ಅವರ ಹುಟ್ಟು ಹಬ್ಬದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ದೇಶ ಹಾಗೂ ವಿಶ್ವದಲ್ಲಿಯೇ ಪರಿಸರ ಕಲಿಶಿಸತವಾಗಿದೆ. ಮನುಷ್ಯ ತನ್ನ ಸ್ವಾರ್ಥಕ್ಕೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ಪ್ರತಿ ಮನೆಯಲ್ಲೂ ಒಂದು ಗಿಡ ನೆಡುವುದರ ಮೂಲಕ ಪರಿಸರವನ್ನು ಉಳಿಸಬೇಕು. ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಪರಿಸರ ಮತ್ತು ವನ್ಯಜೀವಿ ರಕ್ಷಣಾ ವೇದಿಕೆ ಯವರು ಸಾಮಾಜಿಕ ಕಳಕಳಿ ಇರುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನೀವು ಮಾಡುವ ಉತ್ತಮ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಇರುತ್ತದೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ನವೀನ್ ಕುಮಾರ್, ಕಾರ್ಯದರ್ಶಿ ತಿಪ್ಪೇಸ್ವಾಮಿ, ರಾಜ್ಯ ಸಂಚಾಲಕರಾದ  ರುದ್ರಮನಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವೇದಮೂರ್ತಿ ಭೀಮಸಮುದ್ರ, ಅಜಯ್ ಕುಮಾರ್, ಬಸವರಾಜ್, ಫಕೀರಪ್ಪ, ಅಶೋಕ್,  ಪ್ರಸನ್ನ, ದುರ್ಗೇಶ್, ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜು ಸೇರಿದಂತೆ ಇತರರು ಇದ್ದರು. ಇದೇ ವೇಳೆ ಜಿ.ಎಸ್. ಕುಮಾರ್ ಅವರನ್ನು ಪರಿಸರ ಮತ್ತು ವನ್ಯಜೀವಿ ಸುರಕ್ಷಣಾ ವೇದಿಕೆಯಿಂದ ಸನ್ಮಾನಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment