Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ಅಂಗವಿಕಲ ನೌಕರರು ಸರ್ಕಾರಕ್ಕೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್. 05 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಅಂಗವಿಕಲ ನೌಕರರ ಸಂಘದ ಸದಸ್ಯರು ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸರ್ಕಾರಿ ಅಂಗವಿಕಲ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ರಾಜ್ಯದ ಎಲ್ಲಾ ಇಲಾಖೆಗಳ ಅಂಗವಿಕಲತೆ ಉಳ್ಳ ಸರ್ಕಾರಿ ನೌಕರರನ್ನು ಪ್ರತಿನಿಧಿಸುತ್ತಿರುವ ಸರ್ಕಾರದ ಅಧಿಕೃತ ಮಾನ್ಯತೆ ಪಡೆದ ಏಕೈಕ ಸಂಘವಾಗಿದ್ದು ಕಳೆದ 40 ವರ್ಷಗಳಿಂದ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿದೆ ದಿವ್ಯಾಂಗ ನೌಕರರು ಸರ್ಕಾರಿ ಸೇವೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿದ್ದು ಅವರಿಗೆ ಅವರದೇ ಆದ ವಿಶೇಷ ಸೌಲಭ್ಯಗಳನ್ನು ಕಾರ್ಯನಿರ್ವಹಿಸುವ ಕಚೇರಿಯಲ್ಲಿ ಅಂಗವಿಕಲರ ಸ್ನೇಹಿ ವಾತಾವರಣ ಕಲ್ಪಿಸಿದರೆ ಪರಿಣಾಮಕಾರಿಯಾಗಿ ಹೆಚ್ಚಿನ ಉತ್ಸಾಹದಿಂದ ಸೇವೆ ಸಲ್ಲಿಸಲು ಅನುಕೂಲವಾಗುತ್ತದೆ 2016ರ ಅಂಗವಿಕಲ ವ್ಯಕ್ತಿಗಳ ಕಾಯ್ದೆ ಅನ್ವಯ ದಕ್ಕಬೇಕಾದ ಸಂವಿಧಾನಾತ್ಮಕ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಚೆನ್ನಕೇಶವ ಮಾತನಾಡಿ ಸರ್ಕಾರಿ ಇಲಾಖೆಗಳಲ್ಲಿ ದಿವ್ಯಾಂಗ ನೌಕರರು ಇತರೆ ಸರ್ಕಾರಿ ನೌಕರರಂತೆ ಶ್ರಮವಹಿಸಿ ಕೆಲಸ ನಿರ್ವಹಿಸುತ್ತಾರೆ ಎಲ್ಲ ನೌಕರರನ್ನು ಸಮಾನವಾಗಿ ಕಾಣುವಂತೆ ದಿವ್ಯಾಂಗ ನೌಕರರಿಗೆ ಸೌಲಭ್ಯಗಳನ್ನು ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ಅಂಗವಿಕಲ ನೌಕರರಿಗೆ ಶೇ6 ರಷ್ಟು ಪ್ರಯಾಣ ಭತ್ಯೆಯ ಆದೇಶವನ್ನು ಕೂಡಲೇ ಹೊರಡಿಸಬೇಕು ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಅಂಗವಿಕಲ ನೌಕರರಿಗೆ ಕೇಂದ್ರ ಸರ್ಕಾರವು ಎ ಬಿ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಭರ್ತಿಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ್ದು ರಾಜ್ಯ ಸರ್ಕಾರವು ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಮಾತ್ರ ಭರ್ತಿಯಲ್ಲಿ ಮೀಸಲಾತಿ ನೀಡಿದೆ ಅದೇ ರೀತಿಯಾಗಿ ಏ ಮತ್ತು ಬಿ ವೃಂದದ ಹುದ್ದೆಗಳಿಗೂ ಬರ್ತಿಯಲ್ಲಿ ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸುವಂತೆ ಒತ್ತಾಯಿಸಿದರು ರಾಜ್ಯದಲ್ಲಿ ವಿಕಲಚೇತನರಿಗೆ ಪ್ರಯಾಣದಲ್ಲಿ ನೀಡುತ್ತಿರುವ ಬಸ್ ಪಾಸ್ 100 ಕಿಲೋಮೀಟರ್ ಗೆ ಮಿತಿ ಗೊಳಿಸಿದ್ದು ಇದನ್ನು ಕೈ ಬಿಟ್ಟು ಶಕ್ತಿ ಯೋಜನೆ, ಮಾದರಿಯಲ್ಲಿ ಅಂಗವಿಕಲರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ರಾಜ್ಯದಲ್ಲಿನ ಅಂಗವಿಕಲರ ಸಬಲೀಕರಣಕ್ಕಾಗಿ 2016 ಅಧಿನಿಯಮದ ಅಡಿಯಲ್ಲಿ ಅಂಗವಿಕಲರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಕಲಚೇತನರ ಸಂಪನ್ಮೂಲ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ರೆಹಾನ್ ಪಾಷಾ ಮಾತನಾಡಿ ನೌಕರರು ಸಲ್ಲಿಸಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎ. ಚನ್ನಕೇಶವ, ಈ ಮಲ್ಲಿಕಾರ್ಜುನ ಓ ನಟರಾಜ್ ಓಬಣ್ಣ ಸಂಪತ್ ಕುಮಾರ್ ಶಿವಕುಮಾರ್. ಮಲ್ಲಿಕಾರ್ಜುನ ಎಚ್ ಓ ರಾಜಣ್ಣ, ರುದ್ರಮುನಿ ಪ್ರಸನ್ನ ಅನಂತಮ್ಮ, ಶಕೀಲಾ ಭಾನು ಶಿವಕುಮಾರ್ ನಾಗರಾಜ್,ವಿಜಯಕುಮಾರ್.ಎಚ್ ಜಿ. ನಾಗರಾಜ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment