Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SDA ನೌಕರ ಆತ್ಮಹತ್ಯೆ : PA ಹೆಸರು ಕೇಳಿ ಬಂದಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..?

ಹೆಬ್ಬಾಳ್ಕರ್
---Advertisement---

ಬೆಳಗಾವಿ: ರುದ್ರಣ್ಣ ಆತ್ಮಹತ್ಯೆ ಕೇಸಲ್ಲಿ ಸಚಿವೆ ಲಕ್ಷ್ಮೀ ಹೆಬ್ವಾಳ್ಕರ್ ಪಿಎ ಹೆಸರು ಕೇಳಿ ಬಂದಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ಈ ಘಟನೆ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘಟನೆಗಳು ನಡೆಯಬಾರದು. ನಿನ್ನೆ ಮಾಧ್ಯಮದಲ್ಲಿ ನೋಡಿದಾಗಲೇ ಈ ವಿಚಾರ ಗೊತ್ತಾಗಿದ್ದು. ಸ್ವಲ್ಪ ಬ್ಯುಸಿ ಇದ್ದ ಕಾರಣ. ತನಿಖೆ ನಡೀತಾ ಇದೆ.

ಅದರ ಬಗ್ಗೆ ನನಗೆ ಏನು ಗೊತ್ತಿಲ್ಲ. ಮಾಧ್ಯಮದ ಸಹೋದರರಿಗೆ ರುದ್ರಣ್ಣ ಎಂಬುವವರು ಫೋನ್ ಮಾಡಿ, ಇದರ ಬಗ್ಗೆ ಮೇಡಂರಿಗೆ ಗಮನಕ್ಕಿಲ್ಲ ಎಂದು ಅವರೇ ಮಾತಾಡಿರುವುದನ್ನು ಮೀಡಿಯಾದವರು ಪ್ರಸಾರ ಮಾಡಿರೋದನ್ನ ನೋಡಿದ್ದೀನಿ. ನಾನ್ಯಾವತ್ತು ಅವರನ್ನು ಭೇಟಿಯಾಗಿಲ್ಲ. ಯಾವುದೇ ಒಂದು ಕೆಲಸಕ್ಕೂ ಕೂಡ ಅವರನ್ನ ಸಂಪರ್ಕ ಮಾಡಿಲ್ಲ. ವೈಯಕ್ತಿಕವಾಗಿಯೂ ಅವರನ್ನು ಭೇಟಿಯಾಗಿಲ್ಲ. ಈಗ ಏನಾಗಿದೆ ಅನ್ನೋದು ಪ್ರಾಥಮಿಕವಾಗಿ ತನಿಖೆ ನಡೀತಾ ಇದೆ.

ಮಂತ್ರಿಗಳು ಅಂದ್ಮೇಲೆ 10-15 ಪಿಎಗಳು ಇರ್ತಾರೆ. ಪ್ರತಿಯೊಬ್ಬರು ಕೂಡ ನಾವು ಹೇಳಿರುವಂತ ಕ್ಷೇತ್ರದ ಕೆಲಸಗಳನ್ನು ಆಗಬೇಕು ಎಂಬ ವಿಚಾರಕ್ಕೆ ಪಿಎ ಗಳನ್ನ ನೇಮಿಸಿರುತ್ತೇವೆ. ಸದ್ಯಕ್ಕೆ ಏನನ್ನು ಹೇಳುವುದಕ್ಕೆ ಬಯಸುವುದಿಲ್ಲ. ಇದು ತನಿಖೆಯ ಹಂತದಲ್ಲಿದೆ. ನಾನೊಬ್ಬ ಮಂತ್ರಿಯಾಗಿ, ಅದರಲ್ಲೂ ಒಂದು ಜವಾವ್ದಾರಿಯುತ ಸ್ಥಾನದಲ್ಲಿರುವ ಮಹಿಳೆಯಾಗಿ ಆ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತೇನೆ, ಸಾಂತ್ವಾನ ಹೇಳುತ್ತೇನೆ. ಮತ್ತೆ ನಿಷ್ಪಕ್ಷಪಾತವಾಗಿ ಈ ತನಿಖೆ ನಡೆಯಲಿ ಎಂದೇ ಬಯಸುತ್ತೇನೆ. ನಿರಂತರವಾಗಿ ನಾನು ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿದ್ದೇನೆ. ಊಹಾ ಪೋಹಗಳು ಶುರುವಾದರೆ ಹೆಚ್ಚಾಗುತ್ತಲೆ ಇರುತ್ತದೆ. ಹೀಗಾಗಿ ಕೂಲಂಕುಷವಾಗಿ ತನಿಖೆ ನಡೆಸಿ, ಬೇಗ ಸತ್ಉಅಸತಚಯತೆ ಹೊರಗೆ ಬರಬೇಕು. ಹಾಗೂ ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದೇ ನಮ್ಮ ಆಸೆ ಕೂಡ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment