Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯಾ ವಿಕಾಸ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ :ಕನ್ನಡ ಭಾಷೆಗಳ ರಾಣಿ ಇದು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದ್ದು, ಭಾರತದಲ್ಲಿ ಇಲ್ಲಿಯವರೆಗೂ 15 ಭಾಷೆಗಳು ಶಾಸ್ತ್ರೀಯ ಸ್ಥಾನಮಾನವನ್ನು ಪಡೆದುಕೊಂಡಿವೆ. ಅದರಲ್ಲಿ ಕನ್ನಡ ಭಾಷೆಯೂ ಒಂದಾಗಿದೆ. ಕರ್ನಾಟಕ ಇತಿಹಾಸಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ತನ್ನದೇ ಆದ ಇತಿಹಾಸವನ್ನು ಹೊಂದಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಹೇಳಿದರು.

ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶನಿವಾರ 69ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದ ಅಂಗವಾಗಿ ವಿಶೇಷ ಅಹ್ವಾನಿತರಾಗಿ ಆಗಮಿಸಿ ಅವರು ಮಾತನಾಡಿದರು.

ಈಗಿನ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ‘ಇಸಿಲ’ ಎಂಬ ಗ್ರಾಮವು ಐದು ಸಾವಿರ ವರ್ಷಗಳ ಹಿಂದೆಯೇ ಕನ್ನಡ ಭಾಷೆ ಮಾತನಾಡುವ ಜನರು ವಾಸವಾಗಿದ್ದರು ಎಂಬ ಕುರುಹು ದೊರೆತಿದೆ. ಅಷ್ಟೇ ಅಲ್ಲದೇ ಅಶೋಕನ ಹಲವಾರು ಶಾಸನಗಳು ಕರ್ನಾಟಕದಲ್ಲಿ ದೊರೆತಿರುವುದು ಹೆಮ್ಮೆಯ ವಿಷಯ. ಕನ್ನಡವನ್ನು ಬಳಸುವುದರ ಮೂಲಕ ಬೆಳೆಸುವ ಕೆಲಸ ನಮ್ಮದಾಗಲಿ ನವೆಂಬರ್ ಕನ್ನಡಿಗರಾಗದೆ, ನಂ 1 ಕನ್ನಡಿಗರಾಗಿ ನಮ್ಮ ನಾಡು ನುಡಿಯನ್ನು ಬೆಳೆಸುವಂತಹ ಕೆಲಸ ನಮ್ಮದಾಗಲಿ ಎಂದು ತಿಳಿಸಿದರು. ಅಲ್ಲದೇ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಈ ದಿನ ಸನ್ಮಾನಿಸುತ್ತಿರುವುದು ಸಂತೋಷದಾಯಕ ವಿಷಯ ಎಂದು ತಿಳಿಸಿದರು.

ಶಾಲೆಯ ಮುಖ್ಯೋಪಾದ್ಯಾಯರಾದ ಎನ್.ಜಿ.ತಿಪ್ಪೇಸ್ವಾಮಿ ಅವರು ಪಾಸ್ತ್ತಾವಿಕವಾಗಿ ಮಾತನಾಡಿ, ಜಿ.ಪಿ.ರಾಜರತ್ನಂ ಅವರ ರತ್ನನ್ ಪದಗಳ ಕುರಿತು ವಿಷಯ ತಿಳಿಸಿದರು. 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕನ್ನಡ ಮಾಣಿಕ್ಯ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಐ.ಸಿ.ಎಸ್.ಇ ಪ್ರಾಚಾರ್ಯರಾದ ಬಸವರಾಜಯ್ಯ ಪಿ ಅವರು ಮಾತನಾಡುತ್ತಾ ಕನ್ನಡ ಎನೆ ಕುಣಿದಾಡುವುದೇನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು ಎಂಬ ಕವಿಯ ವಾಣಿಯಂತೆ ಯಾರೇ ಕನ್ನಡ ಭಾಷೆಯಲ್ಲಿ ಮಾತನಾಡಿದರೂ ನಮ್ಮ ಗಮನ ಆ ಕಡೆ ಸೆಳೆಯುತ್ತದೆ. ಅದೂ ಮಾತೃ ಭಾಷೆಯ ಸೆಳೆತ, ಎಲ್ಲಾ ಭಾಷೆಯನ್ನು ಕಲಿಯೋಣ ಆದರೆ ಮಾತೃಭಾಷೆಯನ್ನು ಬಳಸೋಣ, ಬೆಳೆಸೋಣ, ನಾನು ಗಣಿತ ಶಿಕ್ಷಕನಾದರೂ ಕೂಡ ಕನ್ನಡ ನನಗೆ ಅಚ್ಚ್ಚುಮೆಚ್ಚಿನ ವಿಷಯ ಎಂದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎಂ.ಪೃಥ್ವೀಶ ಅವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿಯೂ ಕನ್ನಡಿಗರೂ ಕೀರ್ತಿ ಪತಾಕೆಯನ್ನು ಸಾಧಿಸುತ್ತಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ವಿಷಯ. ಮಕ್ಕಳಾದಂತಹ ನೀವುಗಳು ಸಹ ಭವಿಷ್ಯದಲ್ಲಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಸಾಧನೆಗೈಯುವಂತಾವರಾಗಿ ಎಂದು ತಿಳಿಸಿದರು. ತಾವು ಮಾಡುವಂತಹ ಸಾಧನೆಯಲ್ಲಿ ‘ಕನ್ನಡಿಗರು’ ಎಂಬ ಹೆಮ್ಮೆ ನಮ್ಮಲ್ಲಿ ಇರಲಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ. ವಿಜಯ್ ಕುಮಾರ್ ಅವರು ಮಾತನಾಡುತ್ತಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ.ಎಂ.ಶಿವಸ್ವಾಮಿರವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕನ್ನಡ ಭಾಷೆಯ ಉಳಿವಿಗಾಗಿ ಹಲವಾರು ಉತ್ತಮ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇವರ ಸಾಧನೆ ಹಾಗೂ ಇವರ ಪರಿಶ್ರಮವನ್ನು ತಿಳಿಸುತ್ತದೆ ಎಂದರು. ನಂತರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಐ.ಸಿ.ಎಸ್.ಇ. ಉಪಪ್ರಾಚಾರ್ಯರಾದ ಅವಿನಾಶ್.ಬಿ ಅವರು ಬೋಧಕ/ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಶಾ ರೆಡ್ಡಿ ಮತ್ತು ಶಿಫಾಮರಿಯಂ ನಿರೂಪಿಸಿದರು. ಕುಮಾರಿ ತೃಷಾ ಜಿ ಆರ್ ಪ್ರಾರ್ಥಿಸಿದರು. ಕುಮಾರಿ ಗ್ರೀಷ್ಮಾ ಸ್ವಾಗತಿಸಿದರು, ಕುಮಾರಿ ಜಾಹ್ನವಿ ಬಿ.ಎಸ್ ವಂದಿಸಿದರು.

10ನೇ ತರಗತಿಯಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ವಿವರ ಈ ರೀತಿ ಇದೆ.

1) ಅಭಿನವ್ ಕೆ.ಆರ್
2) ಯೋಗಿನಿ ಪಡ್ವಿಡಿ ವಿ.ಎಂ
3) ಪರಿಣಿತ ಎಸ್
4) ಅನಘ ಹೆಚ್ ಕಶ್ಯಪ್
5) ಚೇತನ್.ಆರ್
6) ಶ್ರೇಯಾ ಹೆಚ್.ಎಂ.ಕೆ
7) ಜ್ಞಾನಶ್ರೀ.ಪಿ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...