Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ : ಗ್ರಾಹಕರು ಕಂಗಾಲು..!

---Advertisement---

ಬೆಂಗಳೂರು: ಈರುಳ್ಳಿ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದು ಮನೆಯಲ್ಲಿ ಅಡುಗೆ ಮಾಡುವವರ ಪಾಲಿಗೆ, ಹೊಟೇಲ್ ಉದ್ಯಮಿಗಳಿಗೆ ಹೆಚ್ಚು ತಲೆ ನೋವಾಗಿದೆ. ಹೀಗೆ ದಿನನಿತ್ಯ ಬಲಸುವ ಪದಾರ್ಥಗಳು ಹೀಗೆ ಬೆಲೆ ಏರಿಕೆಯಾಗುತ್ತಲೇ ಇದ್ದರೆ ಜನಸಾಮಾನ್ಯರು ಬದುಕುವುದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಈಗ ಈರುಳ್ಳಿಯಂತು ದಿನೇ ದಿನೇ ಏರಿಕೆಯತ್ತಲೇ ಮುಖ ಮಾಡಿದೆ.

ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ ಹೊರತಾಗಿಲ್ಲ. ಬೆಂಗಳೂರು ನಗರದಲ್ಲಿಯೂ ಈರುಳ್ಳಿ ಬೆಲೆ ಜಾಸ್ತಿಯಾಗಿದ್ದು, 40-50 ರೂಪಾಯಿಯಷ್ಟಿದ್ದ ಈರುಳ್ಳಿ ಬೆಲೆ ಈಗ 80-90 ರೂಪಾಯಿ ಆಗಿದೆ. ಈ ಬೆಲೆ ಏರಿಕೆ ಸಹಜವಾಗಿಯೇ ರೈತರ ಮೊಗದಲ್ಲಿ ಸಂತಸ ತಂದಿದೆ. ಆದರೆ ಗ್ರಾಹಕರಿಗೆ ಕಣ್ಣೀರು ತರಿಸಿದೆ.

ಈ ಸಮಯಕ್ಕೆ ಹೋಲಿಕೆ ಮಾಡಿಕೊಂಡರೆ ಸಾಮಾನ್ಯವಾಗಿ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ಈಗ ನೋಡೊದರೆ ಬೆಲೆ ಗಗನ ಕುಸುಮವಾಗುತ್ತಲೆ ಇದೆ. ಕೆಜಿ ಈರುಳ್ಳಿಗೆ 80 ರೂಪಾಯಿ ಕೊಟ್ಟು ತೆಗೆದುಕೊಂಡರೆ ಮಿಡಲ್ ಕ್ಲಾಸ್ ಮಂದಿ ಬದುಕುವುದಾದರೂ ಹೇಗೆ..? ಕೆಜಿ ಈರುಳ್ಳಿ ಒಂದು ವಾರಗಳ ಕಾಲ ಬಳಕೆಗೆ ಬರುವುದು ಹೆಚ್ಚು. ಹೀಗಿರುವಾಗ ಬಡವರ ಬದುಕು ಹೇಗೆ ಸಾಗುತ್ತದೆ ಎಂಬ ಚಿಂತೆ ಹಲವರಿಗಾಗಿದೆ. ಹೆಚ್ಚು ಮಳೆಯಿಂದಾಗಿ ಈರುಳ್ಳಿ ಬೆಳೆಯೆಲ್ಲಾ ನಾಶವಾಗಿದೆ. ಈಗ ಏನು ಮಾರಾಟವಾಗುತ್ತಿದೆ ಇದೆಲ್ಲಾ ಹಳೆಯ ಸ್ಟಾಕ್ ಆಗಿದೆ. ಉತ್ತಮ ಗುಣಮಟ್ಟದ ಈರುಳ್ಳಿಗೆ ಒಳ್ಳೆಯ ಬೆಲೆಯೂ ಸಿಗುತ್ತಿದೆ. ಆಸರೆ ಕೊಂಡುಕೊಳ್ಳುವವರಿಗೇನೆ ಈರುಳ್ಳಿ ಕಣ್ಣೀರು ತರಿಸುತ್ತಿರುವುದು. ಆದಷ್ಟು ಬೇಗ ದಿನಬಳಕೆಯ ಸಾಮಾಗ್ರಿಗಳ ಮೇಲೆ ಬೆಲೆ ಹತೋಟಿಗೆ ಬಂದರೆ ಸಾಕು ಎನ್ನುತ್ತಿದ್ದಾರೆ ಗೃಹಿಣಿಯರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment