Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೀಪಾವಳಿ ಬಳಿಕ ಅಡಿಕೆಯಲ್ಲಿ ಬಂಪರ್ ಏರಿಕೆ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಈಗ ಬೆಲೆ ಎಷ್ಟಿದೆ..?

---Advertisement---

ಶಿವಮೊಗ್ಗ: ಕಳೆದ ಕೆಲವು ತಿಂಗಳ ಹಿಂದೆ ಅಡಿಕೆಯಲ್ಲಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿತ್ತು. ಇದೀಗ ದೀಪಾವಳಿ ಬಳಿಕ ಅಡಿಕೆ ಬೆಲೆಯಲ್ಲಿ ಬಂಪರ್ ಏರಿಕೆಯೇ ಕಂಡಿದೆ. ಇದು ಅಡಿಕೆ ಬೆಳೆಗಾರರಿಗೆ ಸಿಕ್ಕಾಪಟ್ಟೆ ಖುಷಿಕೊಟ್ಟ ವಿಚಾರವಾಗಿದೆ. ಸದ್ಯಕ್ಕೆ ಮಲೆನಾಡಿನ ಭಾಗದಲ್ಲಿ ರೈತರು ಅಡಿಕೆ ಕೊಯ್ಲು ಮಾಡುತ್ತಿದ್ದು, ಇದೇ ಸಂದರ್ಭದಲ್ಲಿ ಅಡಿಕೆ ಬೆಲೆಯಲ್ಲಿ ಏರಿಕೆಯಾಗಿರುವುದು ರೈತರ ಸಂತಸಕ್ಕೆ ಕಾರಣವಾಗಿದೆ. ಅಡಿಕೆ ಫಸಲು ಕಡಿಮೆಯಾಗಿದೆ ಎಂದು ಬೇಸರ ಮಾಡಿಕೊಳ್ಳುತ್ತಿರುವಾಗಲೇ ಬೆಲೆ ಏರಿಕೆಯಿಂದ ಕೊಂಚ ನೆಮ್ಮದಿ ಸಿಕ್ಕಂತೆ ಆಗಿದೆ.

ಮಲೆನಾಡು ಭಾಗದಲ್ಲಿ ಶಿವಮೊಗ್ಗ, ಅಡಿಕೆಯ ಪ್ರಮುಖ ಮಾರುಕಟ್ಟೆಯಾಗಿದೆ. ವಿವಿಧ ಮಾದರಿಯ ಅಡಿಕೆಗಳು ಸಹ ಮಾರುಕಟ್ಟೆಗೆ ಬರುತ್ತಿವೆ. ಹೊಸ ಅಡಿಕೆಗಳು ಬಂದಾಕ್ಷಣಾ ಬೆಲೆ ಏರಿಕೆಯಾಗಿದ್ದು ಸಹಜವಾಗಿಯೇ ರೈತರಿಗೆ ಸಂತಸ ತಂದಿದೆ. ಸದ್ಯ ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂಬುದನ್ನು ನೋಡುವುದಾದರೆ..?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ ನೋಡುವುದಾದರೆ, ಗೊರಬಲು ಅಡಿಜೆಗೆ 17,500-32,089 ಇದೆ. ನ್ಯೂ ವೆರೈಟಿ ಅಡಿಕೆ 39,069-49,299 ಇದೆ. ಬೆಟ್ಟೆ ಅಡಿಕೆ 43,152-57,310 ಇದೆ. ರಾಶಿ ಅಡಿಕೆ 33,899-49,559 ಇದೆ. ಸರಕು ಅಡಿಕೆ 47,000-83,163 ಇದೆ.

ಸಾಗರ ಮಾರುಕಟ್ಟೆಯಲ್ಲಿ ನೋಡುವುದಾದರೆ, ಕೆಂಪುಗೋಟು 26,280-29,089 ಇದೆ. ಕೋಕ 18,114-24,584 ರೂಪಾಯಿ ಇದೆ. ಚಾಲಿ 26,214-32,299 ಇದೆ. ಬಿಳಿ ಗೋಟು 17,421-24,199 ಇದೆ. ಬಿಳಿಗೋಟು ಅಡಿಕೆ 17,421 – 24,199 ಇದೆ. ಇನ್ನು ರಾಶಿ 43,019 – 48,359 ಮಾರಾಟವಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment