Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಫ್ ಆಸ್ತಿ | ಕಠಿಣ ಕ್ರಮಕ್ಕೆ ಮುಸ್ಲಿಂ ಮುಖಂಡರ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

 

ಸುದ್ದಿಒನ್, ಚಳ್ಳಕೆರೆ, ನವೆಂಬರ್. 15b: ತಾಲೂಕಿನ ಚರ್ಮ ಕೈಗಾರಿಕೆ ಜಾಗ ಹಾಗೂ ಜನತಾ ಕಾಲೋನಿಯಲ್ಲಿರುವ ಚರ್ಮದ ಮಂಡಿ ಜಾಗ ಮತ್ತು ಜನತಾ ಕಾಲೋನಿ, ಮಸೀದಿ ಪಕ್ಕದಲ್ಲಿರುವ ಸಮುದಾಯ ಭವನವನ್ನು ವಕ್ಫ್ ಬೋರ್ಡ್ ಗೆ ಸೇರಿಸಬೇಕೆಂದು ನಗರಸಭೆ ಅಧಿಕಾರಿಗಳಿಗೆ ನವೆಂಬರ್ 06, 2023ರಲ್ಲಿ ಚಳ್ಳಕೆರೆ ಜಾಮಿಯಾ ಮಸೀದಿ ವತಿಯಿಂದ ಅರ್ಜಿ ಸಲ್ಲಿಸಿದ್ದಾರೆ ಎಂಬ ಪತ್ರವು ಸಾಮಾಜಿಕ ಜಾಲತಾಣಗಳಲ್ಲಿ ಅ.28ರಂದು ಹರಿದಾಡಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಮುಸ್ಲಿಂ ಸಮುದಾಯದ ಮುಖಂಡ ಹೆಚ್ಎಸ್ ಸೈಯದ್ ಸ್ಪಷ್ಟನೆ ನೀಡಿದರು.

ನಗರದ ಶಾದಿ ಮಹಲ್ ನಲ್ಲಿ ಮುಸ್ಲಿಂ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಚಳ್ಳಕೆರೆ ನಗರದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸಹೋದರತೆ ಭಾವದಿಂದ ಜೀವನ ನಡೆಸುತ್ತಿದ್ದು ಸಮುದಾಯಗಳ ನಡುವೆ ದ್ವೇಷ ಭಾವನೆ ಉಂಟುಮಾಡುವ ಉದ್ದೇಶದಿಂದ ಇಂತಹ ನಕಲಿ ಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಅಂಶಗಳು ಪತ್ರದಲ್ಲಿ ಇರುವುದನ್ನು ಗಮನಿಸಿದ ಜಿಲ್ಲಾ ವಕ್ ಮಂಡಳಿಯವರು ಚಳ್ಳಕೆರೆ ಜಾಮಿಯ ಮಸೀದಿಯವರ ಮೂಲಕ ಅ.30 ರಂದು ನಗರಸಭೆಗೆ ಅರ್ಜಿ ಸಲ್ಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರದ ಧೃಡೀಕರಣ ಪ್ರತಿಯನ್ನು ನೀಡಲು ಮನವಿ ಮಾಡಿತ್ತು ಅದರಂತೆ ಬುಧವಾರ ನಗರಸಭೆಯಿಂದ ಹಿಂಬರಹ ನೀಡಿದ್ದು ನಗರಸಭೆ ದಾಖಲಾತಿಗಳ ಪ್ರಕಾರ ಮನವಿಯಲ್ಲಿ ಕೋರಿರುವಂತೆ ನಗರಸಭೆಯಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರಕ್ಕೂ ನಗರ ಸಭೆಗೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರಾದ ದಾದಾಪೀರ್, ಅಲ್ಲಭಕಾಶ್, ಎಸ್ ಪಿ ಜುಬೇರ್, ಖಲಾಮಿ, ಸಲೀಂ, ಅನ್ವರ್, ರಶೀದ್ ,ಮೌಲಾನ ನೂರುಲ್ಲಾ, ದಾವೂದ್ ಮೌಲಾನ, ಬಶೀರ್ ಹಯಾತ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment