Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಣಿ ವಿಲಾಸ ಕೋಡಿ ಬೀಳೋದಕ್ಕೆ ಇನ್ನೆಷ್ಟು ಅಡಿಗಳು ಬಾಕಿ ಇದೆ : ಇಂದಿನ ನೀರಿನ ಮಟ್ಟ ಎಷ್ಟು..?

---Advertisement---

ಚಿತ್ರದುರ್ಗ: ಕೋಟೆನಾಡಿನ ಜಿಲ್ಲೆಯ ಮಂದಿ ಕಾತುರದ ಕಣ್ಗಳಿಂದ ಕಾಯುತ್ತಿರುವ ದಿನ ಎಂದರೆ ಅದು ವಾಣಿ ವಿಲಾಸ ಜಲಾಶಯ ಕೋಡಿ ಬೀಳುವ ಕ್ಷಣಕ್ಕಾಗಿ. ಚಿತ್ರದುರ್ಗ ರೈತರ ಜೀವನಾಡಿಯಾಗಿದೆ ವಾಣಿ ವಿಲಾಸ ಜಲಾಶಯ. ಇನ್ನು 1.95 ಅಡಿಯಷ್ಟು ನೀರು ಹರಿದು ಬಂದರೆ ಮೂರನೇ ಬಾರಿ ಕೋಡಿ ಬೀಳಲಿದೆ.

ನಿಂತಿದ್ದ ಮಳೆರಾಯ ಮತ್ತೆ ಸುರಿಯಲು ಶುರು ಮಾಡಿದ್ದಾನೆ. ಹೀಗಾಗಿ ಉಳಿದಿರುವ ಒಂದು ಮುಕ್ಕಾಲು ಅಡಿ ತುಂಬುವ ಭರವಸೆಯೂ ಜಿಲ್ಲೆಯ ಜನರಲ್ಲಿ ಜೀವವಾಡುತ್ತಿದೆ. ಅಂದ ಹಾಗೇ ಜಲಾಶಯಕ್ಕೆ ಸದ್ಯಕ್ಕೆ 924 ಅಡಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಪ್ರಸ್ತುತ ಜಲಾಶಯದ ಮಟ್ಟ 128.05 ಅಡಿ ತಲುಪಿದೆ. ಇನ್ನು ಕೇವಲ 1.95 ಅಡಿಗಳಷ್ಟು ನೀರು ಜಲಾಶಯಕ್ಕೆ ಹರಿದು ಬಂದರೆ ಮೂರನೇ ಬಾರಿಗೆ ಕೋಡಿ ಬೀಳಲಿದೆ. ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಬಳಿ ವೇದಾವತಿ ನದಿಗೆ ಅಡ್ಡಲಾಗಿ ವಾಣಿ ವಿಲಾಸ ಜಲಾಶಯ ನಿರ್ಮಾಣ ಮಾಡಲಾಗಿದೆ. ಈ ಜಲಾಶಯ ಒಟ್ಟು 135 ಅಡಿಗಳಷ್ಟು ನೀರನ್ನು ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆಯ ಅಬ್ಬರ ರಾಜ್ಯದಲ್ಲಿ ಜೋರಾಗಿಯೇ ಇತ್ತು. ಹೀಗಾಗಿ ರಾಜ್ಯದ ಕೆರೆ ಕಟ್ಟೆಗಳು, ಹಲವು ಪ್ರಮುಖ ಜಲಾಶಯಗಳು ತುಂಬಿವೆ. ಆದರೆ ಚಿತ್ರದುರ್ಗದ ಪಾಲಿಗೆ ನೋಡಿದರೆ ಹೇಳಿಕೊಳ್ಳುವಂತ ಮಳೆಯಾಗಿರಲಿಲ್ಲ. ಆದರೂ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿದು ಬಂದಿದ್ದೇ ಆಶ್ಚರ್ಯವಾಗಿತ್ತು. ಒಳಹರಿವು ಇಂದಿಗೂ ಇಂದು ಕೇವಲ ಒಂದು ಮುಕ್ಕಾಲು ಅಡಿ ನೀರು ಬಂದರೆ ಕೋಡಿ ಬೀಳುತ್ತದೆ. ಅದೇ ನಿರೀಕ್ಷೆಯಲ್ಲಿದ್ದಾರೆ ಸ್ಥಳೀಯರು.ವ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment