Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನ-ಬೆಳ್ಳಿಯಲ್ಲಿ ಮತ್ತೆ ಇಳಿಕೆ : ಇಂದು ದರ ಎಷ್ಟಿದೆ..?

---Advertisement---

ಬೆಂಗಳೂರು: ದೀಪಾವಳಿ ಹಬ್ಬದ ಬಳಿಕ ಚಿನ್ನ ಬೆಳ್ಳಿ ದರದಲ್ಲಿ ದಿನೇ ದಿನೇ ಇಳಿಕೆಯಾಗುತ್ತಿದೆ. ಹತ್ತು ಗ್ರಾಂಗೆ ಒಂದು ಲಕ್ಷ ರೂಪಾಯಿ ಏರಿಕೆಯಾಗುತ್ತದೆ ಎಂಬ ಭಯ ಆಭರಣ ಪ್ರಿಯರಿಗೆ ಕಾಡುತ್ತಿತ್ತು. ಆದರೆ ಈಗ ಕೊಂಚ ನಿರಾಳವಾಗಿದೆ. ದೀಪಾವಳಿ ಮುಗಿದ ಮೇಲೆ ದಿನೇ ದಿನೇ ಚಿನ್ನದ ಬೆಲೆಯಲ್ಲಿ ಕಡಿಮೆಯಾಗುತ್ತಲೆ ಬರುತ್ತಿದೆ. ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಯಾವ್ಯಾವ ನಗರದಲ್ಲಿ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಕಳೆದ ಹತ್ತು ದಿನದಲ್ಲಿ ಹತ್ತು ಗ್ರಾಂ ಮೇಲೆ 4,750 ರೂಪಾಯಿ ಕಡಿಮೆಯಾಗಿದೆ. ಅದರಲ್ಲೂ ಮದುವೆ ಸಂದರ್ಭದಲ್ಲಿಯೇ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವುದು ಗ್ರಾಗಕರ ಸಂತಸಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ. ಅಮೆರಿಕಾ ಅಧ್ಯಕ್ಷೀಯ ಚುನಾವಣಾ ಫಲಿತಾಂಶದ ಬಳಿಕ ಚಿನ್ನದ ದರದಲ್ಲಿ ಶೇಕಡ 6ರಷ್ಟು ಇಳಿಕೆಯಾಗಿದೆ. ಸಾಮಾನ್ಯವಾಗಿ ಮದುವೆ, ಶುಭ ಸಮಾರಂಭಗಳ ಸಮಯದಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿತ್ತು. ಆದರೆ ಈ ತಿಂಗಳಲ್ಲಿ ಇಳಿಕೆಯತ್ತ ಮುಖ ಮಾಡಿರುವುದು ಖುಷಿ ತಂದಿದೆ.

ಇಂದು (ಶುಕ್ರವಾರ) ಬೆಂಗಳೂರು ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 75,650 ರೂಪಾಯಿ ಇದೆ. 1 ಗ್ರಾಂ ಚಿನ್ನಕ್ಕೆ 7,565 ರೂಪಾಯಿ ಇದೆ. ಇನ್ನು 22 ಕ್ಯಾರೆಟ್ ಆಭರಣ ಚಿನ್ನದ ದರ ಹತ್ತು ಗ್ರಾಂಗೆ ಸದ್ಯಕ್ಕೆ 69,350 ರೂಪಾಯಿ ಇದೆ. ಒಂದು ಗ್ರಾಂಗೆ 6,935 ರೂಪಾಯಿ ಆಗಿದೆ. ಬೆಳ್ಳಿಯ ದರದಲ್ಲೂ ದಿನೇ ದಿನೇ ಇಳಿಕೆಯಾಗುತ್ತಿದ್ದು, ಇಂದು 91 ರೂಪಾಯಿ ಇತ್ತು. ಆದರೆ‌ ಕಳೆದ ಎರಡ್ಮೂರು ದಿನದಿಂದ ಕಡಿಮೆಯಾಗುತ್ತಿತ್ತು. ಇಂದು 91 ರೂಪಾಯಿಗೆ ಬಂದು ನಿಂತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment