Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಟ್ಟೆ ವಿತರಣೆಯಲ್ಲಿ ಲೋಪ, ಮುಖ್ಯ ಶಿಕ್ಷಕಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

---Advertisement---

 

ದಾವಣಗೆರೆ, ನವಂಬರ್.16. ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ ಇದಕ್ಕೆ ಸಹಕರಿಸಿದ ದೈಹಿಕ ಶಿಕ್ಷಕ ಮಂಜುನಾಥ ಇವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.

ಶಾಲಾ ಮಕ್ಕಳಿಗೆ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದ ಎಲ್ಲಾ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂದು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತದೆ. ವಿತರಣೆ ಮಾಡಿದ ಬಗ್ಗೆ ಆಯಾ ದಿನದಂದು ಎಸ್‍ಎಟಿಎಸ್ ತಂತ್ರಾಂಶದಲ್ಲಿ ದಾಖಲು ಮಾಡಲಾಗುತ್ತದೆ. ನವೆಂಬರ್ 13 ರಂದು ಶಾಲೆಯಲ್ಲಿ ಭೌತಿಕವಾಗಿ 87 ಮಕ್ಕಳಿದ್ದು ಇದರಲ್ಲಿ 79 ಮೊಕ್ಕಳಿಗೆ ಮೊಟ್ಟೆ ವಿತರಣೆ ಮಾಡಿ ಉಳಿದ 8 ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗಿರುತ್ತದೆ. ಆದರೆ ಎಸ್‍ಎಟಿಎಸ್ ತಂತ್ರಾಂಶದಲ್ಲಿ 104 ಮಕ್ಕಳಿರುತ್ತಾರೆ ಎಂದು ದಾಖಲು ಮಾಡಿರುವುದು ಕಂಡು ಬಂದಿದ್ದು ಮೊಟ್ಟೆ ವಿತರಣೆಯಲ್ಲಿ ಲೋಪವಾಗಿರುತ್ತದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶಾಲೆಗೆ ಭೇಟಿ ನೀಡಿದಾಗ ಕಂಡುಬಂದಿದ್ದು ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ ಮೇರೆಗೆ ಅಮಾನತು ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...