Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೋಟೆ ಜಾಗ ಕಬಳಿಕೆ : ಶ್ರೀನಿವಾಸ್, ಭಾಸ್ಕರ್ ವಿರುದ್ಧ ದೀಪು ಆರೋಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಮುಕ್ತಿಧಾಮ ಚಿತಾಗಾರದಿಂದ ಸ್ವಲ್ಪ ಮುಂದೆ ಕೋಟೆಗೆ ಸೇರಿದ ಒನ್ನೆ ಬಾಗಿಲಿನ ಜಾಗಕ್ಕೆ ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್, ಭಾಸ್ಕರ್ ಇವರುಗಳು ಕಾಂಪೌಂಡ್ ಹಾಕಿ ಕಬಳಿಸಿದ್ದಾರೆಂದು ನಗರಸಭೆ ಸದಸ್ಯ ದೀಪು ಆಪಾದಿಸಿದರು.

 

ಕೋಟೆಗೆ ಸೇರಿದ ಜಾಗ ಒತ್ತುವರಿ ಮಾಡಿರುವ ಸ್ಥಳದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಾಲ್ಕು ಎಕರೆ ಕೋಟೆ ಜಾಗವನ್ನು ರಾಮಮೂರ್ತಿ ಹೆಸರಿಗೆ ಮಾಡಿಸಿಕೊಟ್ಟಿರುವ ಶ್ರೀನಿವಾಸ್ ಹಾಗೂ ಭಾಸ್ಕರ್ ಇವರುಗಳಿಗೆ ನಗರಸಭೆ ಜಾಗವನ್ನು ಕಬಳಿಸಲು ಹೊರಟಿದ್ದೇನೆಂದು ನನ್ನ ಮೇಲೆ ಆರೋಪಿಸುವ ನೈತಿಕತೆಯಿಲ್ಲ.

ಕೋಟೆ ಜಾಗ ಒತ್ತುವರಿ ಮಾಡಿಕೊಂಡಿರುವ ಇವರುಗಳ ವಿರುದ್ದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ದೂರು ಕೊಡುವುದರ ಜೊತೆ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು.

ಕೋಟೆ ಮುಂಭಾಗ ಬೃಹತ್ ಕಟ್ಟಡಗಳನ್ನು ಕಟ್ಟಿಕೊಂಡು ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಶ್ರೀನಿವಾಸ್ ಮತ್ತು ಭಾಸ್ಕರ್ ಇವರುಗಳು ನಗರಸಭೆಗೆ ಕಂದಾಯ ಪಾವತಿಸುತ್ತಿಲ್ಲ. ಕಟ್ಟಡ ಕಟ್ಟುವಾಗಲೂ ನಗರಸಭೆಯಿಂದ ಲೈಸೆನ್ಸ್ ಪಡೆದಿಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟೆ ಜಾಗವನ್ನು ಈಗ ಒತ್ತುವರಿ ಮಾಡಿದ್ದಾರೆ. ಪುರಾತತ್ವ ಇಲಾಖೆಯ ನಿಯಮ ಉಲ್ಲಂಘಿಸಿ ಕೋಟೆ ಎದುರುಗಡೆ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ. ಕೋಟೆ ಜಾಗ ಒತ್ತುವರಿಯಾಗಿರುವುದನ್ನು ಉಳಿಸುವುದಕ್ಕಾಗಿ ಈಗಿನಿಂದ ನಮ್ಮ ಹೋರಾಟ ಶುರುವಾಗಲಿದೆ ಎಂದು ದೀಪು ತಮ್ಮ ಮೇಲೆ ಆಪಾದನೆ ಮಾಡಿರುವವರಿಗೆ ತಿರುಗೇಟು ನೀಡಿದರು. ನಗರಸಭೆ ಮಾಜಿ ಸದಸ್ಯ ವಿಜಯಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...