Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬದುಕಿದ್ದಾಗ ನೋಡಿಕೊಳ್ಳದವರು, ಆಸ್ತಿಗಾಗಿ ಹೆಣದ ಹೆಬ್ಬೆಟ್ಟು ಒತ್ತಿಸಿಕೊಂಡರು…!

Facebook
Twitter
Telegram
WhatsApp

ಮೈಸೂರು : ಈ ಘಟನೆ ವಿಚಿತ್ರವೆನಿಸಿದ್ರು ಸತ್ಯದ ಸಂಗತಿ. ಹಣ – ಆಸ್ತಿ ಅಂದ್ರೆ ಎಂಥವರಿಗೂ ದುರಾಸೆ ಬಂದೇ ಬರುತ್ತೆ. ಆದ್ರೆ ಜಿಲ್ಲೆಯಲ್ಲೊಂದು ಆಸ್ತಿಗಾಗಿ ವಿಚಿತ್ರ ಘಟನೆಯೇ ನಡೆದಿದೆ. ಬದುಕಿದ್ದಾಗ ಯಾರೂ ನೋಡಿಕೊಳ್ಳಲಿಲ್ಲ. ಸತ್ತಾಗ ಆಸ್ತಿ ಪಾಲು ಪಡೆಯಲು ಕಿತ್ತಾಟ ನಡೆಸಿದ ಘಟನೆಯಿದು.

ಹನ್ನೊಂದು ದಿನಗಳ ಹಿಂದೆ ಜಯಮ್ಮ (63) ಎಂಬುವವರು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅವರ ಅಣ್ಣನ‌ ಮಕ್ಕಳು ಆಸ್ತಿಗಾಗಿ ಶವದ ಹೆಬ್ಬೆಟ್ಟು ಒತ್ತಿಸಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮೈಸೂರಿನ ಶ್ರೀರಾಂಪುರದಲ್ಲಿ ಘಟನೆ ಇದು.

ಮೃತ ಜಯಮ್ಮನ ಕುಟುಂಬಕ್ಕೆ ಪಿರ್ತಾರ್ಜಿತವಾಗಿ 14 ಎಕರೆ ಆಸ್ತಿ ಇತ್ತು. ಮದುವೆಯಾದ ಹೊಸದರಲ್ಲೇ ಪತಿಯಿಂದ ದೂರವಾಗಿದ್ದ ಜಯಮ್ಮ. ಆಸ್ತಿ ಪಾಲು ಪಡೆಯಲು ಪತಿಯೂ ಬದುಕಿಲ್ಲ, ಮಕ್ಕಳೂ ಇಲ್ಲ. ಹೀಗಾಗಿ ಜಯಮ್ಮನಿಗೆ ಇಬ್ಬರು ಅಕ್ಕಂದಿರು, ಒಬ್ಬ ತಮ್ಮ ಇದ್ದಾನೆ. ಮೃತ ಜಯಮ್ಮನ ಆಸ್ತಿ ಪಡೆಯಲು ಇವರುಗಳ ನಡುವೆಯೇ ಕಿತ್ತಾಟ ಶುರುವಾಗಿದೆ.

ಅಕ್ಕನ ಮಗನಿಂದ ಆಸ್ತಿಗಾಗಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿಸಿಕೊಳ್ಳಲಾಗಿದೆ. ಅದು ಬದುಕಿದ್ದಾಗ ಅಲ್ಲ. ಶವವಾಗಿ ಮಲಗಿದ ಮೇಲೆ. ಇದನ್ನ ಹಲವರು ವಿರೋಧಿಸಿದರು ಕುಟುಂಬಸ್ಥರು ಕೇಳಿಲ್ಲ.‌ಮಾತಿನ ಚಕಮಕಿ ನಡೆದ ವಿಡಿಯೋ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!