Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಚಾಲನೆ

---Advertisement---

ಚಿತ್ರದುರ್ಗ. ಅ.19: ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೇಸೆ ಮುಕ್ತ ವಾತಾವರಣ ಸೃಷ್ಠಿಸಿ, ನಿರಂತರವಾಗಿ ಶೌಚಾಲಯಗಳನ್ನು ಬಳಸಲು ಪ್ರೇರೇಪಿಸುಲು ಒತ್ತು ನೀಡುವುದಾಗಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.

ನಗರದ ಜಿ.ಪಂ.ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ, ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

 

ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಜಿಲ್ಲೆಯಲ್ಲಿ ಬಳಕೆಯಲ್ಲಿ ಇರದ ಸಮುದಾಯ ಶೌಚಾಲಯಗಳನ್ನು ಗುರುತಿಸಿ, ದುರಸ್ಥಿಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತ ಮಾಡಲಾಗುವುದು. ಶೌಚಾಲಯಗಳ ಕೊರತೆ ಇರುವ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಲಾಗುವುದು. ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರಿಗೆ ಆರೋಗ್ಯ ಶಿಬಿರ ಆಯೋಜಿಸಿ, ಸುರಕ್ಷಾ ಪರಿಕರಗಳನ್ನು ವಿತರಿಸುವುದರ ಜೊತೆಗೆ ಗೌರವಿಸಲಾಗುವುದು ಎಂದು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದರು.

 

ಈಗಾಗಲೇ ಜಿಲ್ಲೆಯನ್ನು ಬಯಲು ಶೌಚಮುಕ್ತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರಸಕ್ತ ವರ್ಷ 16 ಸಾವಿರ ಶೌಚಾಲಯಗಳ ನಿರ್ಮಾಣದ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಹಳ್ಳಿಗಳಲ್ಲಿ ಶೌಚಾಲಯ ಹೊಂದಿರದವರು ಶೌಚಾಲಯ ಕಟ್ಟಿಸಿಕೊಳ್ಳಲು ಮುಂದೆ ಬಂದರೆ ಅವರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಸಾರ್ವಜನಿಕರು ಸಿಟಿಜನ್ ಪೋರ್ಟ್ಲ್ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ನೇರವಾಗಿ ಭೇಟಿ ನೀಡಬಹುದು. ಆಯ್ಕೆಯಾದ ಎಸ್.ಸಿ ಹಾಗೂ ಎಸ್.ಟಿ ಫಲಾನುಭವಿಗಳಿಗೆ ರೂ.20,000 ಇತರೆ ಫಲಾನುಭವಿಗಳಿಗೆ ರೂ.12,000 ಸಹಾಯಧನ ನೀಡುವುದಾಗಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಮಾಹಿತಿ ನೀಡಿದರು.

 

ಈ ವೇಳೆ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಮಹಿಳೆಯರ ಶೌಚಾಲಯವನ್ನು ಉದ್ಘಾಟಿಸಲಾಯಿತು. ಡಿ.ಎಸ್.ಹಳ್ಳಿ ಗ್ರಾಮ ಪಂಚಾಯಿತಿಯ ಮೂವರು ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ಕಾರ್ಯಾದೇಶ ನೀಡಲಾಯಿತು.

 

ಜಿ.ಪಂ.ಮುಖ್ಯ ಯೋಜನಾಧಿಕಾರಿ ಗ್ರಾಯಿತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಾಸದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆ..2ಕ್ಕೆ 3400 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿಗಳು ಹೀಗಿವೆ!

ಪೇಟೆಂಟ್ ರಿಜಿಸ್ಟ್ರೇಷನ್, ಉತ್ಪನ್ನ ಅಭಿವೃದ್ಧಿ, ವಿನ್ಯಾಸ, ನವಾನ್ವೇಷಣೆ, ಸಂಶೋಧನೆಗೆ ಪ್ರೋತ್ಸಾಹ, ಪ್ರಾಯೋಗಿಕ ಬೋಧನಾ ಕೌಶಲ್ಯದ ಉನ್ನತೀಕರಣ ಹಾಗೂ ಪೋಷಕರ ಸೂಕ್ತ ಉತ್ತೇಜನದ ಮೂಲಕ ವಿದ್ಯಾರ್ಥಿಗಳ ಮಾನಸಿಕ ವಿಕಸನದೊಂದಿಗೆ ಜಾಗತಿಕ ಶೈಕ್ಷಣಿಕ ನಾಗಲೋಟಕ್ಕೆ ಹೊಂದಿಕೊಳ್ಳುವುದನ್ನು ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಆದ್ಯತೆಯಾಗಿಸಿಕೊಳ್ಳಬೇಕು

10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ

ಚಿತ್ರದುರ್ಗ : ಗ್ರಾಮೀಣ ಶಾಲೆಯಿಂದ ವೈದ್ಯಕೀಯ ಶಿಕ್ಷಣದ ಟಾಪರ್‌ವರೆಗೆ: ಮಕ್ಕಳ ತಜ್ಞ ಡಾ. ಎಸ್.ಎಚ್. ದೇವರಾಜ್ ಸುದೀರ್ಘ ಸೇವೆಗೆ ತೆರೆ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಕೂದಲು ಉದರುವ ಸಮಸ್ಯೆ ಕಡಿಮೆಯಾಗುತ್ತೆ!

Leave a Comment