Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿರಾಸೆ ಮಾತನ್ನಾಡಿದ್ದ ಯೋಗೀಶ್ವರ್ ಗೆಲುವಿನ ನಗೆ: 30 ಸಾವಿರ ಅಂತರದಿಂದ ಗೆಲ್ಲುವ ವರದಿ ಸಲ್ಲಿಕೆ..!

---Advertisement---

ಬೆಂಗಳೂರು: ನವೆಂಬರ್ 23ಕ್ಕೆ ಬೈಎಲೆಕ್ಷನ್ ವರದಿ ಹೊರ ಬೀಳಲೊದೆ. ಇದರ ನಡುವೆ ಆಶ್ಚರ್ಯಕರ ಬೆಳವಣಿಗೆಯು ನಡೆದಿದೆ. ಈ ಬಾರಿ ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಇಲ್ಲಿ ಸಿಪಿ ಯೋಗೀಶ್ವರ್ ವರ್ಸಸ್ ನಿಖಿಲ್ ಕುಮಾರಸ್ವಾಮಿ ನಡುವೆ ನೆಕ್ ಟು ನೆಕ್ ಸ್ಪರ್ಧೆ ನಡೆದಿತ್ತು. ಬಿಜೆಪಿ ಘಟಾನುಘಟಿ ನಾಯಕರೆಲ್ಲ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದ್ದರು. ಮೇಲ್ನೋಟದ ವರದಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜಯ ಎಂಬ ಚರ್ಚೆಗಳು ನಡೆದಿತ್ತು.

ಇದಕ್ಕೆ ಪೂರಕವಾಗಿ ಸಿಪಿ ಯೋಗೀಶ್ವರ್ ಅವರು ಸೋಲಿನ ಅನುಮಾನ ವ್ಯಕ್ತಪಡಿಸಿದ್ದರು. ಚುನಾವಣೆ ಮುಗಿದ ಕೂಡಲೇ ಸುದ್ದಿಗೋಷ್ಟಿಯಲ್ಲಿ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಫಲಿತಾಂಶಕ್ಕೆ ಎರಡು ದಿನ ಇರುವಾಗಲೇ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಗೆಲುವಿನ ನಗೆ ಬೀರಿದ್ದಾರೆ. ಇವರ ಭೇಟಿಗೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಜೊತೆಗೆ ಭೇಟಿ ಮಾಡಿದ್ದಾರೆ.

ಈ ವೇಳೆ, ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುವ ಭರವಸೆ ನೀಡಿದ್ದಾರೆ. ಮಾಹಿತಿಯ ಪ್ರಕಾರ, ಯಾವ್ಯಾವ ಹೋಬಳಿಗಳಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ಮತದಾನ ಆಗಿದೆ. ಅಂತಿಮವಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕನಿಷ್ಠ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ವರದಿ ಬಂದಿದೆ ಎಂಬುದನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ರಹಸ್ಯ ವರದಿ ಇದಾಗಿದ್ದು, ತಾವೇ ಗೆಲ್ಲುವುದಾಗಿ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಈ ಮಾತು ಕೇಳಿ ಸಿಎಂ ಹಾಗೂ ಡಿಸಿಎಂ ಕೂಡ ಖುಷಿಯಾಗಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment