Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಗ್ಗಾಂವಿಯಲ್ಲೂ ಬಿಜೆಪಿ ಅಭ್ಯರ್ಥಿಯದ್ದೇ ಗೆಲುವು : ಸಮೀಕ್ಷೆ ವರದಿಯಲ್ಲಿ ಉಲ್ಲೇಖ..!

---Advertisement---

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಬಸವರಾಜ್ ಬೊಮ್ಮಾಯಿ ಅವರಿಂದ ತೆರವಾದ ಮೇಲೆ‌ ತಮ್ಮ ಮಗನಿಗೆ ಟಿಕೆಟ್ ಪಡೆದಿದ್ದಾರೆ. ಬಿಜೆಪಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಇದಕ್ಕೆ ಹಲವರ ವಿರೋಧವೂ ಕೇಳಿ ಬಂದಿತ್ತು. ಒಂದಷ್ಟು ಕಾರ್ಯಕರ್ತರು ಬೇಸರ ಮಾಡಿಕೊಂಡಿದ್ದರು. ಇದೆಲ್ಲದರ ನಡುವೆ ಸಮೀಕ್ಷೆಯ ವರದಿಯ ಪ್ರಕಾರ ಭರತ್ ಬೊಮ್ಮಾಯಿ ಅವರಿಗೇನೆ ಗೆಲುವು ಎಂದು ಬಿಂಬಿಸಲಾಗುತ್ತಿದೆ.

ಕಾಂಗ್ರೆಸ್ ನಿಂದ ಯಾಸೀರ್ ಅಹ್ಮದ್ ಸ್ಪರ್ಧೆ ಮಾಡಿದ್ದಾರೆ. ಭರತ್ ಬೊಮ್ಮಾಯಿ ಹಾಗೂ ಯಾಸೀರ್ ನಡುವೆ ನೆಕ್ ಟು ನೆಕ್ ಸ್ಪರ್ಧೆ ನಡೆದಿದೆ. ಕಾಂಗ್ರೆಸ್ ಕೂಡ ನಾವೇ ಗೆಲ್ಲುತ್ತೀವಿ ಎಂಬ ವಿಶ್ವಾಸದಲ್ಲಿದ್ರೆ, ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಅವರು ಕೂಡ ಮಗನ ಗೆಲುವಿನ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ನಡುವೆ P-Marq ಎಂಬ ಸಂಸ್ಥೆ ಮತದಾನೋತ್ತರ ಸಮೀಕ್ಷೆಯ ವರದಿಯನ್ನು ರಿಲೀಸ್ ಮಾಡಿದೆ. ಅದರಲ್ಲಿ ಎನ್ಡಿಎ ಅಭ್ಯರ್ಥಿಗೇನೆ ಗೆಲುವು ಎಂಬುದರ ಸೂಚನೆ ನೀಡಿದೆ.

ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಶಿಗ್ಗಾಂವಿ ಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಪಡಿಸಿದ್ದಾರೆ. ಈ ಕಾರಣಕ್ಕಾಗಿಯೇ ಜನ ಬಿಜೆಪಿಯತ್ತ ಅಂದ್ರೆ ಬಸವರಾಜ್ ಬೊಮ್ಮಾಯಿ ಅವರತ್ತ ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲೂ ಅವರ ಬೆಂಬಲಿಗರು ಬೆಟ್ಟಿಂಗ್ ದಂಧೆ ಶುರು ಮಾಡಿದ್ದಾರೆ. ಅದರಲ್ಲೂ ಜೋಡೆತ್ತುಗಳನ್ನೇ ಅಡವಿಟ್ಟಿದ್ದಾರೆ. ಕಾಂಗ್ರೆಸ್ ನಿಂದ ಯಾಸೀರ್ ಕಣದಲ್ಲಿದ್ದು, ಬಿಜೆಪಿಯಿಂದ ಭರತ್ ಬೊಮ್ಮಾಯಿ ಕಣದಲ್ಲಿದ್ದಾರೆ. ಫಲಿತಾಂಶಕ್ಕೆ ಕೇವಲ 48 ಗಂಟೆಗಳಷ್ಟೇ ಬಾಕಿ ಇದ್ದು, ಜನ ಯಾರತ್ತ ಒಲವು ತೋರಿದ್ದಾರೆಂದು ನೋಡಬೇಕಿದೆ. ಕುತೂಹಲಕ್ಕೂ ಶನಿವಾರ ಮಧ್ಯಾಹ್ನದ ಒಳಗೆ ಬ್ರೆಕ್ ಬೀಳಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment