Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 22 : ಇತ್ತೀಚಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ತುಂಬಿ ತುಳುಕಾಡುತ್ತಿದೆ, ಇದನ್ನು ತಡೆಯುವ ಸಲುವಾಗಿ ಭ್ರಷ್ಠಾಚಾರ ಮುಕ್ತ ಚಿತ್ರದುರ್ಗವನ್ನಾಗಿ ಮಾಡುವ ಸಲುವಾಗಿ ನ. 26 ರಿಂದ 28ರವರೆಗೆ ಆಮ್ ಆದ್ಮಿ ಪಾರ್ಟಿ ಚಿತ್ರದುರ್ಗ ಘಟಕದವತಿಯಿಂದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವುದಾಗಿ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಬಿ.ಇ.ಜಗದೀಶ್ ತಿಳಿಸಿದರು.

 

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂದಿನ ದಿನಮಾನದಲ್ಲಿ ಸಮಾಜಿಕ ನ್ಯಾಯ ಸರಿಯಾದ ರೀತಿಯಲ್ಲಿ ಸಿಕ್ಕಲ್ಲ, ಸಂವಿಧಾನದ ಆಶಯಗಳು ಪೂರ್ಣಗೊಂಡಿಲ್ಲ, ಸರ್ಕಾರದ ಸೌಲಭ್ಯಗಳು ಸಿಕ್ಕವರಿಗೆ ಸಿಗುತ್ತಿವೆ, ಬಡವ ಬಡವನಾಗಿಯೇ ಇರುತ್ತಿದ್ದಾರೆ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ, ಇಂದಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ಎನ್ನುವುದು ತುಂಬಿದೆ ಯಾವ ಸರ್ಕಾರಿ ಕಚೇರಿಯಾದರೂ ಸಹಾ ಲಂಚ ಇಲ್ಲದೆ ಕೆಲಸವಾಗುವುದಿಲ್ಲ, ಆಸ್ಪತ್ರೆಯಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ, ಬಡವರು ಚಿಕಿತ್ಸೆಗಾಗಿ ಹೋದರೆ ಲಂಚ ಇಲ್ಲದೆ ಚಿಕಿತ್ಸೆ ಸಿಗುವುದಿಲ್ಲ ಕಾರ್ಯಾಂಗ ಶಾಸಕಾಂಗ ಭ್ರಷ್ಠಾಚಾರದಿಂದ ಕೊಡಿದೆ. ಇದರಲ್ಲಿ ಮತದಾರನು ಸಹಾ ಭ್ರಷ್ಠಚಾರನಾಗಿದ್ದಾನೆ ಇವರಿಂದ ಮತವನ್ನು ಖರೀದಿ ಮಾಡಿದ ಚುನಾಯುತ ವ್ಯಕ್ತಿಯೂ ಸಹಾ ಭ್ರಷ್ಠಚಾರನಾಗಿದ್ದಾನೆ ಎಂದು ದೂರಿದರು.

 

ಸಂವಿಧಾನವನ್ನು ಒಪ್ಪಿಕೊಂಡ ನಮಗೆ ಇದರ ಪೂರ್ಣವಾದ ಸೌಲಭ್ಯ ಸಿಗುತ್ತಿಲ್ಲ, ಇದನ್ನು ಹೇಳುವುದರ ಮೂಲಕ ನಮ್ಮನ್ನು ಚುನಾಯುತ ಪ್ರತಿನಿಧಿಗಳು ಯಾಮಾರಿಸುತ್ತಿದ್ದಾರೆ. ಇದರಿಂದ ಹೊರಬರಬೇಕಿದೆ. ಈ ಹಿನ್ನಲೆಯಲ್ಲಿ ಆಮ್ ಆದ್ಮೀ ಪಾರ್ಟಿಯವತಿಯಿಂದ ನ. 26 ರಿಂದ 28ರವರಗೆ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭ್ರಷ್ಠಾಚಾರ ಮುಕ್ತ ಚಿತ್ರದುರ್ಗಕ್ಕಾಗಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಮೂರು ದಿನ ನಡೆಯುವ ಈ ಸತ್ಯಾಗ್ರಹದಲ್ಲಿ ಆಮ್ ಆದ್ಮೀ ಪಾರ್ಟಿಯ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಸೇರಿದಂತೆ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಟಿಯಲ್ಲಿ ಕಾರ್ಯದರ್ಶಿ ರಾಮಪ್ಪ, ಮಹಿಳಾ ಘಟಕದ ಅಧ್ಯಕ್ಷರಾದ ಜ್ಯೋತಿ, ಹೊಸದುರ್ಗ ತಾ.ಅಧ್ಯಕ್ಷರಾದ ರಾಜು, ಚಿತ್ರದುರ್ಗ ತಾ.ಮಹಿಳಾ ಘಟಕದ ಅಧ್ಯಕ್ಷರಾದ ವಿನೋದಮ್ಮ, ಆಲ್ಪ ಸಂಖ್ಯಾತರ ಘಟಕದ ಆಧ್ಯಕ್ಷರಾದ ತನ್ವೀರ್, ಜಂಟಿ ಕಾರ್ಯದರ್ಶಿ ಲೋಕೇಶಪ್ಪ, ಯುವ ಘಟಕದ ಅಧ್ಯಕ್ಷರಾದ ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...