Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಕರಿಕೆರೆ ತಿಪ್ಪೇಸ್ವಾಮಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನವೆಂಬರ್ 25ರ ಸೋಮವಾರದಂದು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಜಿಲ್ಲೆಯ ಎಲ್ಲಾ ಮಠಾಧೀಶರುಗಳ ನೇತೃತ್ವದಲ್ಲಿ ವಕ್ಫ್ ಮಂಡಳಿಯ ರೈತ ವಿರೋಧಿ ಧರ್ಮ ವಿರೋಧಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲತ್ತೆವೆ ಎಲ್ಲಾ ರೈತ ಬಾಂಧವರು ರೈತ ಸಂಘಟನೆಗಳು ಸಾಮಾಜಿಕ ಸಂಘಟನೆಗಳು ಧಾರ್ಮಿಕ ಸಂಘಟನೆಗಳು ಜಾತ್ಯತೀತರಾಗಿ ಈ ಚಳುವಳಿಯಲ್ಲಿ ಭಾಗವಹಿಸಿ, ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ರೈತರ ಪಹಣಿಯಲ್ಲಿ ಅಧಿಕಾರಿ ಗಳ ತಪ್ಪಿನಿಂದ ಹೆಸರು ತಪ್ಪಾದರೆ ವರ್ಷಗಟ್ಟೆಲೆ ಕಚೇರಿಗೆ ಅಲೆದಾಡಿ ನ್ಯಾಯಾಲಯದ ಮೆಟ್ಟಿಲೇರುವ ಸ್ಥಿತಿಯಲ್ಲೂ ಪೂರ್ವಜರ ರೈತರ ಹೆಸರಿಗಿರುವ ಜಮೀನನ್ನು ರಾತ್ರೋ ರಾತ್ರಿ ವಕ್ಟ್ ಬೋರ್ಡ್ ಹೆಸರು ಬದಲಾಯಿಸುವ ಮೂಕಕ ರೈತರ ಆಸ್ತಿ ಕಬಳಿಸುವುದನ್ನು ಕೈಬಿಡ ಬೇಕು ವಕ್ಟ್ ಬೋರ್ಡ್ ರದ್ದಾಗ ಬೇಕು ರೈತರ ಮಠಾದೀಶರ ಆಸ್ತಿ ಉಳಿಸ ಬೇಕು. ಇದನ್ನು ವಿರೋಧಿಸಿ ನ.25ರಂದು ಜಿಲ್ಲಾ ಕೇಂದ್ರ ಹಾಗೂ 26 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕಿಸಾನ್ ರೈತ ಸಂಘದಿಂದ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಲು ಮುಂದಾಗಿದ್ದೇವೆ ಎಂದರು.

ಭಾರತೀಯ ಕಿಸಾನ್ ಸಂಘದ ಪ್ರಾಂತ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಅಮೃತ ತೆರುಮಾಲ್ ಮಾತನಾಡಿ ದೇಶದಲ್ಲಿ 2013ರ ವೇಳೆ ವಕ್ಫ್ ಕಾಯ್ದೆಗೆ ಅಂದಿನ ಕೇಂದ್ರದ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ತಂದು ಮಿತಿಮೀರಿದ ಅಧಿಕಾರ ಮಂಡಳಿಗೆ ನೀಡಿದ ಪರಿಣಾಮ 8000 ಎಕರೆಗಳಷ್ಟು ಇದ್ದ ವಕ್ಫ್ ಭೂಮಿ ಇಂದು 9,40,000 ದಷ್ಟು ಹೆಚ್ಚು ವಿಸ್ತಾರವಾಗಿದೆ ರೈತರ ಕೃಷಿ ಭೂಮಿ ಸ್ಮಶಾನ ಸರ್ಕಾರಿ ಆಸ್ತಿ ಮಠ ಮಂದಿರಗಳ ಮತ್ತು ಸಾರ್ವಜನಿಕರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಕಬಳಿಸಿ ಘೋಷಣೆ ಮಾಡಿರುವುದು ಭಯಾನಕ ಸತ್ಯವಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕಂಡುಬಂದಿದ್ದು ಇದರ ಸಲುವಾಗಿ ಭಾರತೀಯ ಕಿಸಾನ್ ಸಂಘವು ವಕ್ಫ್ ತೊಲಗಲಿ ದೇಶ ಉಳಿಯಲಿ ಎಂಬ ಅಭಿಯಾನದ ಅಡಿಯಲ್ಲಿ ರೈತ ಘರ್ಜನೆ ರ್ಯಾಲಿಯನ್ನು ನ. 26 ಮಂಗಳವಾರ ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದು ರಾಜ್ಯದ ಸ್ವಾಭಿಮಾನಿ ರೈತರು ವಿವಿಧ ಜನಪರ ಸಂಘಟನೆಗಳು ಪಾಲ್ಗೊಂಡು ರಾಜ್ಯದಲ್ಲಿ ರೈತರ ಬದುಕಿಗೆ ಕೊಳ್ಳಿ ಇಡಲು ಹೊರಟಿರುವ ಕರಾಳ ವಕ್ ಕಾಯ್ದೆಯನ್ನು ರದ್ದುಪಡಿಸಲು ಆಗ್ರಹಿಸಿ ಕಬಳಿಸಿದ ಭೂಮಿಯನ್ನು ಉಳಿಸಿಕೊಳ್ಳಲು ಪಣ ತೊಡೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಿಸಾನ ಸಂಘದ ಓಂಕಾರಪ್ಪ ಜಿ ತಿಪ್ಪೆಸ್ವಾಮಿ ಜ್ಞಾನೇಶ್ವರ್ ಹನುಮಂತಪ್ಪ ಸಿ ವೀರೇಶ್ ಮಂಜುನಾಥ ವೆಂಕಟೇಶ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...