ಸಿರಿಗೆರೆ ವೈದ್ಯ ತಿಮ್ಮೇಗೌಡ ಅಪಘಾತದಲ್ಲಿ ಸಾವು : ನಾಳೆ ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ

1 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರ ಸಿರಿಗೆರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಹಾಗೂ ಮಕ್ಕಳ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಜಿ.ಆರ್. ತಿಮ್ಮೇಗೌಡ (34ವರ್ಷ) ನಿನ್ನೆ(ಶನಿವಾರ) ರಾತ್ರಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೃತರು ವೈದ್ಯರು ತಂದೆ – ತಾಯಿ, ಪತ್ನಿ, ಹಾಗೂ ಒಬ್ಬ ಪುತ್ರಿ ಮತ್ತು ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಉತ್ತಮ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ತಿಮ್ಮೇಗೌಡ ಅವರ ಸಾವಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಅಂತಿಮ ದರ್ಶನಕ್ಕೆ ಮಾಳಪ್ಪನಹಟ್ಟಿ ಸ್ವಗೃಹದಲ್ಲಿ ಇಡಲಾಗಿದೆ. ಅಂತ್ಯಕ್ರಿಯೆಯನ್ನು ನಾಳೆ(ಸೋಮವಾರ) ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿಯ ತೋಟದಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *