Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭಾರತ ಸಂವಿಧಾನ ನಮ್ಮ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ : ಟಿ.ಪಿ.ಉಮೇಶ್

---Advertisement---

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 26  : ಭಾರತ ದೇಶದ ಸಂವಿಧಾನ ಪ್ರಪಂಚದಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ. ಸಂವಿಧಾನ ಭಾರತದಂತ ಬೃಹತ್ ವಿಸ್ತಾರವುಳ್ಳ ಹತ್ತಾರು ಧರ್ಮ, ಸಾವಿರಾರು ಜಾತಿ, ಭಾಷೆ, ಸಂಸ್ಕೃತಿ ಆಚರಣೆಗಳುಳ್ಳ ಜನರನ್ನು ಒಗ್ಗೂಡಿಸಿಕೊಂಡು ದೇಶದ ಸರ್ವಾಂಗೀಣ ಪ್ರಗತಿ ಸಾಧಿಸಲು ಕಾರಣವಾಗಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಹಶಿಕ್ಷಕ ಹೊಳಲ್ಕೆರೆ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಟಿ.ಪಿ.ಉಮೇಶ್ ಹೇಳಿದರು.

ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಸಮೀಪದ ಅಮೃತಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಭಾಗವಾಗಿ ನನ್ನ ಸಂವಿಧಾನ ನನ್ನ ಸ್ವಾಭಿಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1947 ರ ಆಗಸ್ಟ್ 15 ರಂದು ಬ್ರಿಟೀಷರಿಂದ ಭಾರತ ದೇಶ ಸ್ವಾತಂತ್ರ್ಯ ಪಡೆದುಕೊಂಡಿತು. ನಂತರ ದೇಶವನ್ನು ಮುನ್ನಡೆಸುವ ಸಲುವಾಗಿ ಪ್ರಜಾಪ್ರಭುತ್ವ ಸರ್ಕಾರವನ್ನು ಒಪ್ಪಿಕೊಳ್ಳಲಾಯಿತು. ದೇಶದ ಹಾಗು ಪ್ರಾಂತೀಯ ಪ್ರಜಾ ಸರ್ಕಾರಗಳ ರಚನೆ, ಶಾಸಕಾಂಗ ಹಾಗು ಸಂಸತ್ತಿನ ಕಾರ್ಯಗಳು, ಕಾರ್ಯಾಂಗದ ಚಟುವಟಿಕೆಗಳು, ನ್ಯಾಯಪಾಲನೆ ರೀತಿನೀತಿಗಳ ವಿಸ್ತೃತವಾದ ವಿವರಣೆಯುಳ್ಳ ಸರ್ವಕಾಲಕ್ಕು ಹೊಂದಿಕೊಳ್ಳುವ ದೇಶದ ಕಾನೂನಾದ ಸಂವಿಧಾನ ರಚಿಸಲು ಸ್ವತಂತ್ರ ಭಾರತದ ಸಂವಿಧಾನ ರಚನಾ ಸಮಿತಿ ರಚಿಸಲಾಯಿತು. ಡಾ.ಬಾಬು ರಾಜೇಂದ್ರ ಪ್ರಸಾದರು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾದರೆ ಡಾ.ಬಿ.ಆರ್.ಅಂಬೇಡ್ಕರ್‌ ಕರಡು ಸಮಿತಿ ಅಧ್ಯಕ್ಷರಾದರು.

ಎರಡು ವರ್ಷ ಹನ್ನೊಂದು ತಿಂಗಳು ಹದಿನೇಳು ದಿನಗಳ ಕಾಲ ಬಹುಮುಖ ಆಯಾಮದಲ್ಲಿ ಅಧ್ಯಯನದಿಂದ ಸಂವಿಧಾನ ಕರಡು ರಚಿತವಾಯಿತು. ಭಾರತದ ಜನರಿಗೆ ಸಂಸತ್ತಿನ ಜನಪ್ರತಿನಿಧಿಗಳ ಚರ್ಚೆ ಮತ್ತು ಸರ್ವಸಮ್ಮತ ಒಪ್ಪಿಗೆಯ ಮೇರೆಗೆ 1949 ರ ನವೆಂಬರ್ 26 ರಂದು ಅರ್ಪಿಸಿಕೊಳ್ಳಲಾಯಿತು. ಭಾರತ ದೇಶದ ಭೂಭಾಗದಲ್ಲಿ ಸಂವಿಧಾನವನ್ನು 1950 ರ ಜನವರಿ 26 ರಿಂದ ಜಾರಿಗೆ ತರಲಾಯಿತು. ಇಂದಿಗೆ ಸಂವಿಧಾನ ರಚಿತಗೊಂಡು ಎಪ್ಪತ್ತೈದು ವರ್ಷಗಳಾದವು. ಭಾರತ ಸರ್ಕಾರವು 2015 ರಲ್ಲಿ ಭಾರತ ರತ್ನ ಅಂಬೇಡ್ಕರರ 125 ನೇ ಜನ್ಮ ದಿನವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸುವ ಮೂಲಕ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವಾಗಿ ಆಚರಿಸಲು ಸಂಕಲ್ಪ ಮಾಡಿತು. ಭಾರತ ದೇಶವಾಸಿಗಳ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಔದ್ಯೋಗಿಕ ಸಮಾನತೆ ಸ್ವಾತಂತ್ರ್ಯ ಹಕ್ಕುಗಳ ರಕ್ಷಿಸಿ ಎಲ್ಲರು ಭ್ರಾತೃತ್ವ ಸಹೋದರ ಭಾವನೆಯಿಂದ ಬಾಳುವಂತೆ ಅನುವುಮಾಡಿಕೊಟ್ಟಿರುವ ದೇಶದ ಪ್ರಬಲ ಕಾನೂನೆ ನಮ್ಮ ಸಂವಿಧಾನ. ಸಂವಿಧಾನ ನಮ್ಮ ಸ್ವಾಭಿಮಾನದ ಸಂಕೇತ. ಸಾರ್ವಭೌಮ ರಾಷ್ಟ್ರದ ಹೆಗ್ಗುರುತು ಎಂದು ತಿಳಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಭಾಗವನ್ನು ಸಾಮೂಹಿಕವಾಗಿ ಓದಿ ಹೇಳಲಾಯಿತು. ವಿದ್ಯಾರ್ಥಿಗಳಾದ ಕು.ಆರ್.ದೀಕ್ಷಾ, ಎನ್.ಲಕ್ಷ್ಮಿದೇವಿ, ಸಿ.ದೀಕ್ಷಾ, ತರುಣ, ಕೆ.ಉಷ ಸಂವಿಧಾನದ ಪೀಠಿಕೆ ಹಾಗು ಹಕ್ಕು ಕರ್ತವ್ಯಗಳ ಕುರಿತು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಡಿ.ಸಿದ್ಧಪ್ಪ, ರೇಷ್ಮಾ ಜಿ.ಎನ್. ಅಡಿಗೆ ಸಹಾಯಕರಾದ ತಿಮ್ಮಮ್ಮ, ಶಾರದಮ್ಮ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...