Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊರೊನಾ ಹೆಚ್ಚಳದ ಆತಂಕ : ಶಾಲೆ-ಕಾಲೇಜು ಬಂದ್ ಆಗುತ್ತವಾ..?

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಎರಡು ವರ್ಷಗಳ ಕಾಲ ಶಾಲಾ ಕಾಲೇಜಿನ ದರ್ಶನವೇ ಇಲ್ಲದೆ ಮಕ್ಕಳ ಶಿಕ್ಷಣ ಕುಂಠಿತವಾಗಿದೆ. ಹಾಗೋ ಹೀಗೋ ಕೊರೊನಾ ಕಂಟ್ರೋಲ್ ಗೆ ಬಂತು ಅಂತ ನೆಮ್ಮದಿಯ ನಿಟ್ಟುಸಿರು ಬಿಡುತ್ತಾ ಎಲ್ಲವನ್ನು ಶುರು ಮಾಡಿ ಆಗಿದೆ. ಆದ್ರೆ ಈಗ ಮತ್ತೆ ಬೇರೆ ಬೇರೆ ದೇಶಗಳಲ್ಲಿ ಕೊರೊನಾ ಹೆಚ್ಚಳವಾಗ್ತಾ ಇದೆ. ರಾಜ್ಯದಲ್ಲೂ ಅಲ್ಲೊಂದು ಇಲ್ಲಿಂದು ಅಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ.

ಒಂದು ಮತ್ತೆ ಎಲ್ಲಿ ಲಾಕ್ಡೌನ್ ಮಾಡ್ತಾರೋ ಅನ್ನೋ ಭಯ ಮಧ್ಯಮ ಹಾಗೂ ಬಡ ವರ್ಗದವರನ್ನ ನೋವಿಗೆ ಸಿಲುಕಿಸಿದೆ. ಮತ್ತೊಂದು ಮಕ್ಕಳಿಗೆ ಮತ್ತೆ ಶಿಕ್ಷಣದ ಕೊರತೆ ಎದುರಾಗುತ್ತಾ ಅನ್ನೋ ಆತಂಕ ಪೋಷಕರಲ್ಲಿ ಮನೆ ಮಾಡಿದೆ. ಶಾಲಾ ಕಾಲೇಜು ವಂದ್ ಮಾಡುವ ಬಗ್ಗೆ ಸಚಿವ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯಕ್ಕೆ ಶಾಲಾ ಕಾಲೇಜು ಬಂದ್ ಮಾಡುವ ಯಾವುದೇ ಯೋಚನೆ ಇಲ್ಲ. ಪೋಷಕರು ಭಯ ಪಡುವ ಅಗತ್ಯವಿಲ್ಲ. ಶಾಲೆ ಮುಚ್ಚುವ ಯಾವ ನಿರ್ಧಾರವೂ ಸರ್ಕಾರದ ಮುಂದಿಲ್ಲ. ಕೊರೊನಾ ಹೆಚ್ಚಾದರೇ ಸರ್ಕಾರದ ಸಲಹೆ ಪಡೆದು ನಿರ್ಧಾರ ತೆಗೆದುಕೊಳ್ಳುತ್ತೇವೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆಯ ಸಂಪರ್ಕದಲ್ಲಿದೆ ಎಂದಿದ್ದಾರೆ.

ಮೂರನೆ ಅಲೆಯ ಭಯ ಎಲ್ಲರಲ್ಲೂ ಕಡಿಮೆಯಾಗಿತ್ತು. ಲಸಿಕೆ ಪಡೆದಿರಯವುದರಿಂದ ಮೂರನೆಯ ಅಲೆ ಅಷ್ಟಾಗಿ ಎಫೆಕ್ಟ್ ಆಗಲ್ಲ ಎಂದೇ ಹೇಳಲಾಗಿತ್ತು. ಅದೇ ಧೈರ್ಯದಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸಲಾಗುತ್ತಿತ್ತು. ಆದ್ರೆ ಈಗ ಮತ್ತೆ ಮೂರನೆ ಅಲೆ ಬರುವ ಆತಂಕ ಹೆಚ್ಚಾಗುತ್ತಿದೆ. ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸಬೇಕಾ ಬೇಡವಾ ಎಂಬ ಗೊಂದಲದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!