Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೆಂಗಲ್ ಚಂಡಮಾರುತ : ಕರ್ನಾಟಕಕ್ಕೂ ಬಾರೀ ಮಳೆಯ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

---Advertisement---

ಬೆಂಗಳೂರು: ಚಳಿಯನ್ನೇ ತಡೆದುಕೊಳ್ಳಲು ಆಗ್ತಿಲ್ಲ. ಹೀಗಿರುವಾಗ ಮಳೆಯ ವಾತಾವರಣ ಬೇರೆ ಹಿರಗೆ ಹೋಗುವುದಕ್ಕೇನೆ ಕಷ್ಟವಾದಂತ ಪರಿಸ್ಥಿತಿ ನಿರ್ಮಾಣ ಮಾಡಿದೆ. ತಮಿಳುನಾಡಿನ ಪುದುಚೇರಿಗೆ ಪೆಂಗಲ್ ಚಂಡಮಾರುತ ಅಪ್ಪಳಿಸಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ಆಗಿದೆ. ತಮಿಳುನಾಡು, ಚೆನ್ನೈ ಮಾತ್ರವಲ್ಲದೆ ಕರ್ನಾಟಕದ ಹಲವೆಡೆ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ‌. ರಾಜ್ಯದಲ್ಲಿ ಐದು ದಿನ ಅಂದ್ರೆ ಡಿಸೆಂಬರ್ 5ರವರೆಗೂ ಮೈಕೊರೆವ ಚಳಿ ಇರಲಿದೆ ಎಂದು ಹೇಳಲಾಗಿದೆ.

ಇದರ ಜೊತೆಗೆ ರಾಜ್ಯದಲ್ಲಿ ಹಲವೆಡೆ ಯೆಲ್ಲೋ ಹಾಗೂ ರೆಡ್ ಅಲರ್ಟ್ ಅನ್ನು ನೀಡಿದೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಡಿಸೆಂಬರ್ 3ಕ್ಕೆ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ವಿಪರೀತ ಗಾಳಿ ಸಮೇತ ಅತ್ಯಧಿಕ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಹಾಗೇ ಡಿಸೆಂಬರ್ 5ರಂದು ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಈಗಾಗಲೇ ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಾನೇ ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಚಳಿಯ ಜೊತೆಗೆ ಮಳೆಯೂ ಆಗುತ್ತಿರುವ ಕಾರಣ, ವೀಕೆಂಡ್ ಆದ್ರೂ ಕೂಡ ಹೊರಗೆ ಬರಲು ಜನ ಚಿಂತಿಸುವಂತಾಗಿದೆ. ಶಾಪಿಂಗ್, ಸಿನಿಮಾ ಅಂತ ಓಡಾಡುತ್ತಿದ್ದ ಮಂದಿ ಬೆಚ್ಚಗೆ ಒದ್ದು ಮಲಗಿಕೊಳ್ಳುವ ಪ್ಲ್ಯಾನ್ ರೂಪಿಸಿದ್ದಾರೆ. ಇನ್ನು ಐದು ದಿನಗಳ ಕಾಲ ಇದೇ ರೀತಿ ಚಳಿ ಮಳೆ ಇದ್ದು, ಎಚ್ಚರಿಕೆಯಿಂದ ಇರಬೇಕಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment