ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಶುರುವಾಗಿರುವ ಕಾರಣ ಅದರ ಎಫೆಕ್ಟ್ ಕರ್ನಾಟಕದ ಮೇಲೂ ಬಿದ್ದಿದೆ. ಇದರ ಪರಿಣಾಮ ಚಳಿಯ ಸಮಯದಲ್ಲಿ ಜಿಟಿಜಿಟಿ ಮಳೆಯೂ ಸೇರಿಕೊಂಡು ಜನ ಹೊರಗೆ ಹೋಗುವುದಕ್ಕೇನೆ ಸಂಕಷ್ಟ ಪಡುವಂತೆ ಆಗಿದೆ. ಬೆಂಗಳೂರಿನ ಜನಕ್ಕಂತು ನಾವೂ ಸಿಲಿಕಾನ್ ಸಿಟಿಯಲ್ಲಿಯೇ ಇದ್ದೀವಾ ಅಥವಾ ಊಟಿಯಲ್ಲೇನಾದರೂ ಇದ್ದೀವಾ ಎಂಬ ಫೀಲ್ ನಲ್ಲಿದ್ದಾರೆ. ಮುಂದಿನ ಮೂರು ದಿನಗಳ ಕಾಲ ಇದೇ ಥರದ ವಾತಾವರಣ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನದಿಂದ ವಿಪರೀತ ಚಳಿ, ಸಣ್ಣ ಹನಿಯಿಂದ ಬೇಸತ್ತ ಜನಕ್ಕೆ ಇನ್ನು ಮೂರು ದಿನ ಹಿಂಗೇನಾ ಎಂಬುದನ್ನು ಕೇಳಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ. ರಾಜ್ಯದ ಕೆಲ ಜಿಲ್ಲೆಗಳಿಗೆ ಬಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ ಹವಮಾನ ಇಲಾಖೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಕೋಲಾರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಇಂದು ಬೆಳಗ್ಗೆಯಿಂದಾನೇ ಸಿಲಿಕಾನ್ ಸಿಟಿಯಲ್ಲಿ ಮಳೆ ಜೋರಾಗಿದೆ. ಎಲ್ಲೆಡೆ ಮಳೆಯಲಿ ಜೊತೆಯಲಿ ಅಂತ ಜನ ಓಡಾಟ ನಡೆಸಿದ್ದಾರೆ.
ಇನ್ನು ಹಲವೆಡೆ ಈ ಮಳೆಯಿಂದಾಗಿ ರಾಗಿ ಬೆಳೆ ಹಾಳಾಗಿದೆ. ಈಗ ರಾಗಿ ಕೊಯ್ಲು ಮಾಡುವ ಸಮಯ. ಹೀಗೆ ಮಳೆ ಬಂದರೆ ಒಣಗಿದ ರಾಗಿಯ ಮೇಲೆ ಬಿದ್ದು ಕಪ್ಪಾಗುತ್ತದೆ. ನೆಲ ಕಚ್ಚಿ ಕೈಗೆ ಸಿಗಬೇಕಾದ ಬೆಳೆಯೂ ಸಿಗಲ್ಲ. ಹಾಗೇ ಗುಣಮಟ್ಟ ಹಾಳಾಗಿ ಮಾರುಕಟ್ಟೆಯಲ್ಲೂ ಕೇಳುವವರಿಲ್ಲದಂತೆ ಆಗುತ್ತದೆ. ಹೀಗಾಗಿ ರೈತನಿಗೆ ಈಗ ಶುರುವಾಗಿರುವ ಚಂಡಮಾರುತ ಎಫೆಕ್ಟ್ ಸಂಕಷ್ಟ ತಂದೊಡ್ಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್