Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಾರದಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ..!

---Advertisement---

 

 

ಚಿನ್ನ ಬೆಳ್ಳಿ ದರ ಹಾವು ಏಣಿ ಆಟ ಆಡುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಜೊತೆಗೆ ಈ ಹಾವು ಏಣಿ ಆಟದಲ್ಲಿ ಚಿನ್ನ ಖರೀದಿ ಮಾಡಬೇಕು ಎಂದುಕೊಂಡವರು ಯಾವಾಗಪ್ಪ ತೆಗೆದುಕೊಳ್ಳುವುದು ಎಂಬ ಗೊಂದಲ ಉಂಟಾಗಿದೆ. ಸದ್ಯ ಇಂದು 40 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಒಂದು ಗ್ರಾಂ 22 ಕ್ಯಾರಟ್ ಚಿನ್ನದ ದರ 7,130 ರೂಪಾಯಿಗೆ ತಲುಪಿದೆ. ನಿನ್ನೆ ತನಕ 7,090 ರೂಪಾಯಿ ಇತ್ತು.

ಇನ್ನು 24 ಕ್ಯಾರಟ್ ಚಿನ್ನದ ದರವೂ ಏರಿಕೆಯಾಗಿದ್ದು, ಈಗ 7,778 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು ಯಾವುದೇ ವ್ಯತ್ಯಯವಾಗಿಲ್ಲ. 91 ರೂಪಾಯಿ ಇದ್ದ ಬೆಳ್ಳಿ ಬೆಲೆ ಇಂದು ಕೂಡ ಅಷ್ಟೇ ಬೆಲೆ ಇದೆ. ಉಳಿದಂತೆ ಚಿನ್ನ ಬೆಳ್ಳಿಯ ಬೆಲೆ ಭಾರತದಾದ್ಯಂತ ಎಷ್ಟಿದೆ ಎಂಬುದನ್ನು ನೋಡೋಣಾ ಬನ್ನಿ.

ಭಾರತದಲ್ಲಿ 22 ಕ್ಯಾರಟ್ ಹತ್ತು ಗ್ರಾಂ ಚಿನ್ನದ ಬೆಲೆ 71,300 ರೂಪಾಯಿ ಇದೆ. 24 ಕ್ಯಾರಟ್ ಚಿನ್ನದ ಬೆಲೆ 77,780 ರೂಪಾಯಿ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 58,340 ರೂಪಾಯಿ ಆಗಿದೆ. ಉಳಿದಂತೆ ಬೆಳ್ಳಿ ಬೆಲೆ 91 ರೂಪಾಯಿ ಇದೆ. ಬೆಂಗಳೂರು, ಚೆನ್ನೈ, ಮುಂಬೈ, ಕೊಲ್ಕತ್ತಾ, ಕೇರಳ, ಭುವನೇಶ್ವರ ನಗರದಲ್ಲಿ ಹತ್ತು ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 71,300 ಇದೆ. ಉಳಿದಂತೆ ದೆಹಲಿ, ಅಹ್ಮದಾಬಾದ್, ಜೈಪುರ, ಲಕ್ನೋ ನಗರದಲ್ಲಿ ಕೊಂಚ ಏರಿಳಿತದ ಬೆಲೆ ನಿಗದಿಯಾಗಿದೆ. ಒಳ್ಳೆ ಬೆಲೆ ಇಳಿಕೆಯಾಗುವುದಕ್ಕಾಗಿಯೇ ಜನ ಕಾಯುತ್ತಿದ್ದಾರೆ. ಆದರೆ ಈ ಹಾವು ಏಣಿ ಆಟದಲ್ಲಿ ಇಳಿಕೆ ಯಾವಾಗ ಅನ್ನೋದೆ ಚಿಂತೆಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...