Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಎತ್ತಿನ ಗಾಡಿಗೆ ಲಾರಿ ಡಿಕ್ಕಿ, ಓರ್ವ ವ್ಯಕ್ತಿ ಹಾಗೂ ನಾಲ್ಕು ಎತ್ತುಗಳ ಸಾವು

---Advertisement---

ಸುದ್ದಿಒನ್, ಮೊಳಕಾಲ್ಮೂರು, ಡಿಸೆಂಬರ್. 05 : ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಸಾಗುತ್ತಿದ್ದ ಎತ್ತಿ ಗಾಡಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸೇರಿದಂತೆ 4 ಎತ್ತುಗಳು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ಬೈರಾಪುರ ಬಳಿ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

ಚಳ್ಳಕೆರೆ ಕಡೆಯಿಂದ ಮೊಳಕಾಲ್ಮೂರು ಕಡೆಗೆ ಬರುತ್ತಿರುವಾಗ ಹಿಂಬದಿಯಿಂದ ಲಾರಿ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ಕು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ. ಮೃತ ಚಾಲಕನನ್ನು ದಾವಣಗೆರೆಯ ಇಬ್ರಾಹಿಂ (40 ವರ್ಷ) ಎಂದು ಗುರುತಿಸಲಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿ ಲಾರಿ ಚಾಲಕ ಕೂಡ ಅಲ್ಲೆ ಅಸುನೀಗಿದ್ದಾನೆ. ಮೃತನ ವಿಳಾಸ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment