Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣ : ಬಿಜೆಪಿಗೂ ಇದೆ ಲಿಂಕ್.. ಸ್ನೇಹಮಯಿ ಕೃಷ್ಟ ಬಿಡುಗಡೆ ಮಾಡಿದ ದಾಖಲೆಯಲ್ಲೇನಿದೆ..?

---Advertisement---

ಮೈಸೂರು: ಮೂಡಾ ಹಗರಣದಲ್ಲಿ ಕೇವಲ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಬಿಜೆಪಿ ಹಾಗೂ ಜೆಡಿಎಸ್ ನಾಯಕರದ್ದು ಸೈಟ್ ಗಳಿದ್ದಾವೆ ಎಂಬುದು ಬಾರೀ ಚರ್ಚೆಯಾಗಿತ್ತು. ಇದೀಗ ಸ್ನೇಹಮಯಿ ಕೃಷ್ಣಾ ಅವರು ಬಿಜೆಪಿಗೆ ಸಂಬಂಧಿಸಿದಂತೆಯೇ ಒಂದಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಗ್ರಾಮಾಂತರ ಅಧ್ಯಕ್ಷ ಮಹದೇವ ಸ್ವಾಮಿ ಹಾಗೂ ಅವರ ಪತ್ನಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ರಿಲೀಸ್ ಮಾಡಿದ್ದಾರೆ.

ಈ ಬಗ್ಗೆ ಸ್ನೇಹಮಯಿ ಕೃಷ್ಣಾ‌ ಅವರೇ ಖಾಸಗಿ ಚಾನೆಲ್ ನಲ್ಲಿ ಮಾತನಾಡಿದ್ದು, ಆರಂಭದಿಂದಾನೂ ನಾನು ಹೇಳುತ್ತಾ ಇದ್ದೀನಿ. ಸಿದ್ದರಾಮಯ್ಯ ಅವರ ಪ್ರಕರಣವನ್ನು ಉದಾಹರಣೆಯಾಗಿಟ್ಟುಕೊಂಡು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸರಿಯಾದ ತನಿಖೆ ನಡೆಸಿ ಎಂದು ಹೇಳಿದ್ದೇನೆ.. ಆದರೆ ಕೆಲವೊಬ್ಬರು ನಾನು ಉದ್ದೇಶ ಪೂರ್ವಕವಾಗಿ ಬರೀ ಸಿದ್ದರಾಮಯ್ಯ ವಿರುದ್ಧ, ಕಾಂಗ್ರೆಸ್ ವಿರುದ್ಧ ಆರೋಪ ಮಾಡ್ತಾ ಇದ್ದೀನಿ ಅಂತ ಹೇಳಿದ್ದರು. ಹೀಗಾಗಿಯೇ ಇಂದು ಒಂದು ದಾಖಲೆಯನ್ನು ರಿಲೀಸ್ ಮಾಡಿದ್ದೀನಿ. ಈ ಹಿಂದೆ ಮೈಸೂರು ಪ್ರಾಧಿಕಾರದಲ್ಲಿದ್ದಂತ ನಟೇಶ್ ಅವರು ಹಾಗೂ ಅವರ ಪತ್ನಿ ರಶ್ಮಿ ಅವರು ಪಾಲುದಾರರಾಗಿರುವ ಸಂಸ್ಥೆಯಲ್ಲಿ, ಬಿಜೆಪಿಯ ಗ್ರಾಮಾಂತರ ಅಧ್ಯಕ್ಷ ಮಹದೇವ ಸ್ವಾಮಿ ಹಾಗೂ ಅವರ ಪತ್ನಿ ಸೌಮ್ಯ ಅವರು ಕೂಡ ಅದರ ಪಾಲುದಾರರಾಗುರುವುದು ಕಂಡು ಬಂದಿದೆ. ಹೀಗಾಗಿ ಅವರ ಅಕ್ರಮದಲ್ಲಿ ಇವರು ಭಾಗಿಯಾಗಿದ್ದಾರಾ ಎಂಬುದರ ತನಿಖೆ ನಡೆಸಬೇಕೆಂದು ದಾಖಲೆ ನೀಡಿದ್ದೇನೆ.

ಸಂಸ್ಥೆಯಲ್ಲಿ ಪಾಲುದಾರರಾಗಿದ್ದಾರೆ ಎಂದಾಕ್ಷಣ ಅಕ್ರಮ ಮಾಡಿದ್ದಾರೆಂದು ನಾನು ಹೇಳುತ್ತಿಲ್ಲ. ಆದರೆ ಹಣದ ಮೂಲದ ಬಗ್ಗೆಯೂ ತನಿಖೆಯಾಗಬೇಕು. ನಟೇಶ್ ಅವರು ಮೈಸೂರು ಪ್ರಾಧಿಕಾರದಲ್ಲಿದ್ದಂತ ಸಂದರ್ಭದಲ್ಲಿ ಅವರು ಗಳಿಸಿದ ಹಣವನ್ನು ಅವರ ಹೆಂಡತಿಯ ಮೂಲಕ ಈ ಸಂಸ್ಥೆಗೆ ಹೂಡಿದ್ದಾರೆ. ಇದರ ಬಗ್ಗೆ ತನಿಖೆಯಾಗಬೇಕು ಅನ್ನೋದು ನನ್ನ ಉದ್ದೇಶ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...