ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಶಿವಣ್ಣನಿಗೆ ಅನಾರೋಗ್ಯ ಕಾಡುತ್ತಿರುವುದು, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದನ್ನು ಶಿವಣ್ಣನೇ ಈಗಾಗಲೇ ತಿಳಿಸಿದ್ದಾರೆ. ಅದಕ್ಕೆ ಚಿಕಿತ್ಸೆಯೊಂದು ಆಗಬೇಕಿದೆ. ಅಮೆರಿಕಾಗೆ ಹೋಗಬೇಕು ಎಂಬುದನ್ನು ಹೇಳಿದ್ದಾರೆ. ಇದೀಗ ಅಮೆರಿಕಾಗೆ ತೆರಳುವ ಮುನ್ನ ದೇವರ ದರ್ಶನ ಮಾಡಿದ್ದಾರೆ. ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.
ಶಿವಣ್ಣರಿಗೆ ಹೇಳಿ ಕೇಳಿ ದೇವರ ಮೇಲೆ ಅಪಾರ ಭಕ್ತಿ ಇದೆ. ಅದರಲ್ಲೂ ಗುರು ರಾಘವೇಂದ್ರ ಸ್ವಾಮಿಗಳ ಮೇಲೆ ಜಾಸ್ತಿ ಭಕ್ತಿ. ಶಿವಣ್ಣ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆಗೆ ತಿರುಪತಿ ತಮ್ಮಪ್ಪನ ದರ್ಶನವನ್ನು ಮಾಡಿದ್ದಾರೆ. ಶಿವಣ್ಣ, ಗೀತಕ್ಕ ಸೇರಿದಂತೆ ಆಪ್ತ ಗೆಳೆಯರು ದೇವರಿಗೆ ಮುಡಿ ಕೊಟ್ಟಿದ್ದಾರೆ. ಶಿವಣ್ಣ ಇದೇ ತಿಂಗಳು ಚಿಕಿತ್ಸೆಗೆಂದು ಅಮೆರಿಕಾಗೆ ತೆರಳುತ್ತಿದ್ದಾರೆ. ಹೀಗಾಗಿ ದೇವಸ್ಥಾನಗಳಿಗೂ ಭೇಟಿ ನೀಡಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಶಿವಣ್ಣ ತಮ್ಮದೇ ಹೋಂ ಬ್ಯಾನರ್ ನಲ್ಲಿ ಅಭಿನಯಿಸಿದ್ದ ಭೈರತಿ ರಣಗಲ್ ಸಿನಿಮಾ ಸಿಕ್ಕಾಪಟ್ಟೆ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲೂ ಚಿಂದಿ ಉಡಾಯಿತ್ತು. ಶಿವಣ್ಣನ ಸಿನಿಮಾ ಕ್ರೇಜ್ ಕೂಡ ಹುಟ್ಟು ಹಾಕಿತ್ತು. ರಣಗಲ್ ರೀತಿಯೇ ಡಾಲಿ ಕೂಡ ಬಟ್ಟೆ ಹಾಕಿ ಬಂದಿದ್ದರು. ಹೆಣ್ಣು ಮಕ್ಕಳು ಕೂಡ ರಣಗಲ್ ರೀತಿಯೇ ಬಟ್ಟೆ ಹಾಕಿ ಬಂದಿದ್ದರು. ಅಷ್ಟು ಕ್ರೇಜ್ ಹುಟ್ಟು ಹಾಕಿದ್ದ ಸಿನಿಮಾ ಭೈರತಿ ರಣಗಲ್.
ಶಿವಣ್ಣ ಇಂಡಸ್ಟ್ರಿಯ ಬ್ಯುಸಿಯೆಸ್ಟ್ ನಟ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅವರ ಬತ್ತಳಿಕೆಯಲ್ಲಿ ಸಾಕಷ್ಟು ಸಿನಿಮಾಗಳಿದ್ದು, ಸದ್ಯಕ್ಕೆ ಅನಾರೋಗ್ಯದ ಕಾರಣ ಹಿಂದೇಟು ಹಾಕಿದ್ದಾರೆ. ಹೊಸ ಸಿನಿಮಾಗಳಿಗೆ ಸ್ವಲ್ಪ ತಡೆ ನೀಡಿದ್ದು, ವೇತರಿಕೆಯ ಬಳಿಕ ಮತ್ತೆ ಆಕ್ಟೀವ್ ಆಗಲಿದ್ದಾರೆ. ಹೀಗಾಗಿಯೇ ಅವರ ಅಭಿಮಾನಿ ಬಳಗ ಕೂಡ ಬೇಗ ಹುಷಾರಾಗಿ ಶಿವಣ್ಣ ಅಂತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್