ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಬೆಚ್ಚಿ ಬೀಳುವಂತೆ ಮಾಡಿದೆ. ಬ್ಯಾಕ್ ಟು ಬ್ಯಾಕ್ ಸಿಜೇರಿಯನ್ ಆದವರೇ ಸಾವನ್ನಪ್ಪುತ್ತಿದ್ದಾರೆ. ಈ ಸಾವು ಖಂಡಿಸಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನೆ ಕೂಡ ನಡೆದಿದೆ. ಈ ವೇಳೆ ಇಷ್ಟೊಂದು ಸಾವಾದರೂ ಆರೋಗ್ಯ ಸಚಿವರು ಭೇಟಿ ಮಾಡಿಲ್ಲ ಎಂದೇ ಆರೋಪ ಮಾಡಿದ್ದರು ಈ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಬಳ್ಳಾರಿಗೆ ಭೇಟಿ ನೀಡಿದ್ದು, ಬೀಮ್ಸ್ ನಲ್ಲಿ ಪರಿಶೀಲನೆ ನಡೆಸಿದ್ದಾರೆ
ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಐವಿ ಫ್ಲೂಯೆಡ್ ಕಂಪನಿ ವಿರುದ್ದ ಪ್ರಾಸಿಕ್ಯೂಷನ್ ಗೆ ಹೋಗುತ್ತಿದ್ದೇವೆ. ಬಾಣಂತಿಯರ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗಲಿದೆ. ಬಾಣಂತಿಯರ ದಿಢೀರ್ ಸಾವಾಗಿದೆ. ಈ ಸಂಬಂಧ ವೈದ್ಯರಿಂದ ವರದಿ ಕೇಳಿದ್ದೇವೆ. ಐವಿ ಫ್ಲುಯೆಡ್ ಮೇಲೆ ಅನುಮಾನವಿತ್ತು. ಲ್ಯಾಬ್ ನಲ್ಲಿ ಟೆಸ್ಟ್ ಮಾಡಲಾಗಿತ್ತು. ಟೆಸ್ಟ್ ವರದಿ ಬಂದ ಬಳಿಕ ಆ ಔಷಧಿಯನ್ನು ನಿಷೇಧ ಮಾಡಲಾಗಿದೆ. ಆದರೆ ಐವಿ ಫ್ಲುಯೆಡ್ ಸರಿ ಇದೆ ಅಂತ ಕೇಂದ್ರ ಲ್ಯಾಬ್ ವರದಿ ನೀಡಿದೆ.
ಐವಿ ಫ್ಲೂಯೆಡ್ ಬಗ್ಗೆ ನಮಗೂ ಹಿಂಜರಿಕೆಯಿತ್ತು. ಈ ಬಗ್ಗೆ ಸಂಶಯವಿದೆ. ಈಗಾಗಲೇ ಎಲ್ಲಾ ಆಸ್ಪತ್ರೆಗಳಲ್ಲೂ ಇದರ ಬಳಕೆಯನ್ನು ನಿಲ್ಲಿಸಿದ್ದೇವೆ. 327 ಬಾಣಂತಿಯರ ಸಾವು ಆಡಿಟ್ ಆಗಲಿದೆ. ಸತ್ಯ ಗೊತ್ತಾಗಲಿದೆ. ಸಿಎಂ ಹಾಗೂ ನಾನು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ವಿರೋಧ ಪಕ್ಷದವರಾಗಿ ನೀವೂ ಪ್ರತಿಭಟನೆ ಮಾಡುವುದು ಸರಿಯಿದೆ. ಇದು ಭಾವನಾತ್ಮಕ, ಮಾನವೀಯತೆಯ ವಿಚಾರ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್