Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಾವಿ ಅಧಿವೇಶನ : ಚಳ್ಳಕೆರೆ ನಗರಕ್ಕೆ ಯುಜಿಡಿ ಕಲ್ಪಿಸಲು 260 ಕೋಟಿ ರೂ. ಅನುದಾನ ಬಿಡುಗಡೆಗೆ ಶಾಸಕ ಟಿ. ರಘುಮೂರ್ತಿ ಮನವಿ

---Advertisement---

 

 

ಬೆಳಗಾವಿ ಸುವರ್ಣ ವಿಧಾನಸೌಧ (ವಿಧಾನಸಭೆ) ಡಿ. 09 :
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರವು ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿ, ನಗರಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ನಿರ್ಮಾಣಕ್ಕೆ ಅಗತ್ಯವಿರುವ 260 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮನವಿ ಮಾಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕ ಟಿ. ರಘುಮೂರ್ತಿ ಅವರು ಈ ಮನವಿ ಮಾಡಿದರು.

ಚಳ್ಳಕೆರೆ ಕ್ಷೇತ್ರದಲ್ಲಿ ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಚಳ್ಳಕೆರೆ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಉತ್ತಮ ಮೂಲಭೂತ ಸೌಲಭ್ಯ ಕಲ್ಪಿಸುವುದು ನನ್ನ ಆಶಯವಾಗಿದೆ. ಚಳ್ಳಕೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ (ಯುಜಿಡಿ) ಕಲ್ಪಿಸಲು 2013 ರಲ್ಲಿಯೇ ಪ್ರಸ್ತಾಪಿಸಲಾಗಿತ್ತು. ಬಳಿಕ 2021 ರಲ್ಲಿ ಈ ಯೋಜನೆಗೆ 197 ಕೋಟಿ ರೂ. ಗಳ ಅಂದಾಜು ಮಾಡಲಾಗಿತ್ತು. ಇದೀಗ ಯೋಜನೆಯ ವೆಚ್ಚ 253 ಕೋಟಿ ರೂ. ಆಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಪ್ರಸ್ತುತ ಯೋಜನೆಯ ಜಾರಿಗೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ, ಈಗ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದೇನೆ ಎಂದರು.

ಇದಕ್ಕೆ ಉತ್ತರ ನೀಡಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಭೈರತಿ ಸುರೇಶ್ ಅವರು, 2015 ರಲ್ಲಿ ಈ ಯೋಜನೆ 100 ಕೋಟಿ ರೂ. ಗಳ ವೆಚ್ಚದಲ್ಲಿ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಸುಮಾರು 260 ಕೋಟಿ ರೂ. ಗಳ ವೆಚ್ಚದ ಅಂದಾಜು ಮಾಡಲಾಗಿದೆ. ಹೀಗಾಗಿ ಹಣಕಾಸು ಇಲಾಖೆಯ ಸಲಹೆ ಪಡೆದು, ಹಣಕಾಸಿನ ಲಭ್ಯತೆ ನೋಡಿಕೊಂಡು, ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿಗಳೇ ಯೋಜನೆಯ ಜಾರಿಗೆ ಆಸಕ್ತಿ ತೋರಿದ್ದು, ಮುಖ್ಯಮಂತ್ರಿಗಳು ಈ ಯೋಜನೆ ಸಾಕಾರಗೊಳಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment