ಮೈಸೂರು: ದಸರಾ ಸಂಭ್ರಮದಲ್ಲಿ ಯದುವೀರ್ ಮಹಾರಾಜ ಅವರು ಮತ್ತೊಮ್ಮೆ ತಂದೆಯಾಗಿದ್ದರು. ರಾಜಕುಮಾರಿ ತ್ರಿಷಿಕಾ ಅವರು ಎರಡನೇ ಬಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇಂದು ಮಗುವಿನ ತೊಟ್ಟಿಲ ಶಾಸ್ತ್ರ ಅರಮನೆಯಲ್ಲಿ ನೆರವೇರಿದೆ. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ತೊಟ್ಟಿಲ ಶಾಸ್ತ್ರ ನೆರವೇರಿದೆ. ಚಾಮುಂಡಿ ಬೆಟ್ಟದಲ್ಲೂ ಸಂಭ್ರಮ ಮನೆ ಮಾಡಿದೆ.
ತೊಟ್ಟಿಲು ಶಾಸ್ತ್ರಕ್ಕೂ ಮುನ್ನ ರಾಜವಂಶಸ್ಥರು ಚಾಮುಂಡಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಿಯ ಪೂಜಾ ಕೈಕರ್ಯಗಳೆಲ್ಲ ಮುಗಿದ ಮೇಲೆ ತೊಟ್ಟಿಲ ಶಾಸ್ತ್ರವನ್ನು ಮಾಡಿದರು. ಚಾಮುಂಡಿ ಬೆಟ್ಟದ ದೇವಾಲಯದ ಬಳಿ ಇರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಮಾಡಿದರು. ಬಳಿಕ ತೊಟ್ಟಿಲ ಶಾಸ್ತ್ರ ಮಾಡಿದ್ದಾರೆ. ರಾಜಾಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಸಮ್ಮುಖದಲ್ಲಿ ಶಾಸ್ತ್ರ ಸಂಪ್ರದಾಯದಂತೆ ತೊಟ್ಟಿಲ ಪೂಜೆ ನೆರವೇರಿದೆ.
ಯದುವೀರ್ ಅವರ ದೊಡ್ಡ ಮಗ ತನ್ನ ತಮ್ಮನ ತೊಟ್ಟಿಲ ಪಕ್ಕವೇ ನಿಂತು ಶಾಸ್ತ್ರದಲ್ಲಿ ಭಾಗಿಯಾಗಿದ್ದರು. ದಸರಾ ಸಂಭ್ರಮದಲ್ಲಿ ಅಂದರೆ ಅಕ್ಟೋಬರ್ 14ರಂದು ದಸರಾ ಹಬ್ಬದ ದಿನವೇ ತ್ರಿಷಿಕಾ ಅವರು ಎರಡನೇ ಮಗುವಿಗೆ ಜನ್ಮ ನೀಡಿದರು. ಮೂರು ತಿಂಗಳು ತುಂಬುತ್ತಲೇ ಮಗುವಿಗೆ ತೊಟ್ಟಿಲ ಶಾಸ್ತ್ರ ಮಾಡಿ ಸಂಭ್ರಮಿಸಿದ್ದಾರೆ. ಎರಡನೇ ಮಗು ತೊಟ್ಟಿಲ ಒಳಗೆ ಮಲಗಿರುವ ಫೋಟೋ ವೈರಲ್ ಆಗಿದೆ. ಇಡೀ ಕುಟುಂಬ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ತೊಟ್ಟಿಲ ಶಾಸ್ತ್ರ ಮುಗಿಸಿದ್ದಾರೆ. ರಾಜಮನೆತನದಲ್ಲಿ ಮಕ್ಕಳ ನಗು ಕೇಳಿಸುತ್ತಿರುವುದು ಮೈಸೂರು ಜನರಲ್ಲಿ ಸಂತಸ ತಂದಿದೆ. ಅದರಲ್ಲೂ ಈಗ ಎರಡು ಮಕ್ಕಳು ಜನಿಸಿರುವುದು ಸಂಭ್ರಮವನ್ನು ಹೆಚ್ಚಿಸಿದೆ. ಇಡೀ ರಾಜ್ಯದ ಜನ ರಾಜಮನೆತನಕ್ಕೆ ಹಾರೈಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











