Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಂದೇ ಒಂದು ಕರೆ ಕೊಟ್ಟರೆ ವಿಧಾನಸೌಧ ಮುತ್ತಿಗೆ ಹಾಕ್ತಾರೆ.. ಆದರೆ : ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು..?

---Advertisement---

ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ಬೃಹತ್ ಮಟ್ಟದ ಪ್ರತುಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದವರ ಮೇಲೆ ಲಾಠಿ ಚಾರ್ಜ್ ನಡೆದಿದ್ದು, ಎಫ್ಐಆರ್ ಕೂಡ ದಾಖಲಾಗಿದೆ‌. ಇದನ್ನು ವಿರೋಧಿಸಿ ಇಂದು ಕೂಡ ಪಂಚಮಸಾಲಿ ಸಮುದಾಯದವರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸಂಬಂಧ ಮಾತನಾಡಿದ ಬಸವಮೃತ್ಯುಂಜಯ ಸ್ವಾಮೀಜಿ ಅವರು, ಇವತ್ತು ಸ್ವಇಚ್ಛೆಯಿಂದ ಪ್ರತಿ ಹಳ್ಳಿಯಲ್ಲಿ ರಸ್ತೆಗಳನ್ನ ಬಂದ್ ಮಾಡಿದ್ದಾರೆ. ಪ್ರತಿ ತಾಲೂಕಿನ ರಸ್ತೆಗಳನ್ನ ಬಂದ್ ಮಾಡಿದ್ದಾರೆ. ಪ್ರತಿ ಜಿಲ್ಲೆ.. ರಾಷ್ಟ್ರೀಯ ಹೆದ್ದಾರಿಗಳನ್ನ ಸ್ವಯಂ ಸ್ಪೂರ್ತಿಯಿಂದ ಬಂದ್ ಮಾಡಿದ್ದಾರೆ. ಹತ್ತು ಲಕ್ಷ ಸಂಖ್ಯೆಯಲ್ಲಿ ಜನ ಇಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದಾರೆ. ನಮ್ಮೆಲ್ಲ ಜನರಿಗೆ ಹೇಳುವುದಕ್ಕೆ ಇಷ್ಟಪಡುತ್ತೀನಿ, ಶಾಂತಿಯುತವಾಗಿ ಹೋರಾಟ ಮಾಡೋಣಾ. ಯಾವುದೇ ಆಂಬುಲೆನ್ಸ್ ಗೆ ತೊಂದರೆಯಾಗಬಾರದು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹೋರಾಟ ಮಾಡೋಣಾ. ಯಾವುದೇ ಕಾರಣಕ್ಕೂ ಉದ್ರೇಕಕ್ಕೆ ಒಳಗಾಗಬಾರದು. ನಿಮ್ಮ ಕೂಗು ಒಂದೇ ಇರಬೇಕು, ಮುಖ್ಯಮಂತ್ರಿಗಳು ಪಂಚಮಸಾಲಿ ಸಮುದಾಯದವರಿಗೆ ಕ್ಷಮೆ ಕೇಳಬೇಕು.

 

ಎಫ್ಐಆರ್ ಆಗಿರಯವ ದಾಖಲಾಗಿರುವುದನ್ನು ಹಿಂಪಡೆದುಕೊಳ್ಳಬೇಕು. ಇಂಥ ಕೆಲಸಕ್ಕೆ ಕುಮ್ಮಕ್ಕು ಕೊಟ್ಟ ಅಧಿಕಾರಿಗಳನ್ನು ಕೂಡಲೇ ಸಸ್ಪೆಂಡ್ ಮಾಡಬೇಕು. ಇಲ್ಲವಾದಲ್ಲಿ ಉದ್ದೇಶಪೂರ್ವಕವಾಗಿ ಲಿಂಗಾಯತರ ಮೇಲೆ ಹಲ್ಲೆ ಮಾಡಿರುವ ಅಪಕೀರ್ತಿಗೆ ನೀವೂ ಪಾತ್ರರಾಗುತ್ತೀರಿ‌. ಈಗಲೇ ಒಂದು ಕರೆ ಕೊಟ್ಟರೆ ಒಂದು ಲಕ್ಷಕ್ಕೂ ಅಧಿಕ ಪಂಚಮಸಾಲಿ ಸಮುದಾಯದವರು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಾರೆ. ಆದರೆ ಆ ತಾಳ್ಮೆಯನ್ನು ಕಳೆದುಕೊಳ್ಳುವ ಪ್ರಯತ್ನ ಮಾಡಿಲ್ಲ. ಬಸವಣ್ಣನವರ ಸಿದ್ಧಾಂತವನ್ನ ಪಾಲನೆ ಮಾಡುತ್ತಿದ್ದೀವಿ. ಆದರೆ ಪಂಚಮಸಾಲಿ ಸಮುದಾಯದವರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಅನ್ನ ಕೊಡುವ ರೈತರ ಮೇಲೆ ಲಾಠಿ ಚಾರ್ಜ್ ನಡೆದಿದೆ. ನಾವೇನು ಅಂದುಕೊಂಡ್ವಿ ಅವತ್ತು ಎಸ್ಎಂ ಕೃಷ್ಣ ಅವರ ನಿಧನ ಸುದ್ದಿ‌ ಕೇಳಿ ಬೆಂಗಳೂರಿಗೆ ಹೋಗಿದ್ದಾರೆಂದುಕೊಂಡೆವು. ಆದರೆ ಮುಖ್ಯಮಂತ್ರಿಗಳು ಇಲ್ಲೆ ಇದ್ದರು ಎಂಬುದು ತಿಳಿದು ಬೇಸರವಾಯ್ತು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...