Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಿ : ಲಿಂಗಾಯತ ಯುವ ಪಡೆ ಆಗ್ರಹ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 12 : ವೀರಶೈವ ಲಿಂಗಾಯುತ ಜನಾಂಗದ ವಿರೋಧಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರನ್ನು ಲಿಂಗಾಯತ ಯುವ ಪಡೆ ಆಗ್ರಹಿಸಿದ್ದರು.

ಚಿತ್ರದುರ್ಗ ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ವೃತದ ಬಳಿ ಪ್ರತಿಭಟನೆಯನ್ನು ನಡೆಸಿದ ಲಿಂಗಾಯತ ಯುವ ಪಡೆಯ ಪದಾಧಿಕಾರಿಗಳು ಪಂಚಮಸಾಲಿ ಸಮಾಜದ ಬಂಧುಗಳು ಪ್ರವರ್ಗ-2ಎ ಮೀಸಲಾತಿಗಾಗಿ ಶಾಂತಿಯುತವಾಗಿ ಬೇಡಿಕೆ ಈಡೇರಿಕೆಗಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಮನವಿ ಸಲ್ಲಿಸಲು ಆಗಮಿಸಿದಾಗ ಅದರಲ್ಲೂ ನ್ಯಾಯಾಲಯದ ಆದೇಶದ ಅನುಮತಿ ಪಡೆದಿದ್ದರೂ ಸಹ ಏಕಾಏಕೀ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಪ್ರತಿಭಟನೆ ನಿರಂತರ ಮೇಲೆ ಲಾಠಿಛಾರ್ಜ್ ಮಾಡಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ನೂರಾರು ಜನ ಹೋರಾಟಗಾರರಿಗೆ ಮರಣಾಂತಿಕ ಹಲ್ಲೆಯಾಗಿದೆ ಕೈ ಕಾಲುಗಳು ಮುರಿಯಲಾಗಿದೆ. ಜೊತೆಗೆ ಹೋರಾಟಗಾರರ ಮೇಲೆ ಮೊಕದ್ದಮೆ ದಾಖಲಿಸಿ ಬಂಧನ ಸಹ ಮಾಡಿರುತ್ತಾರೆ ಎಂದು ದೂರಿದ್ದಾರೆ.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ವೀರಶೈವ ಲಿಂಗಾಯುತ ಜನಾಂಗದ ಮೇಲೆ ಪದೇ ಪದೇ ದೌರ್ಜನ್ಯ ವೆಸಗುತ್ತಿದೆ. ಈ ಹಿಂದೆ ನಮ್ಮ ಸಮಾಜವನ್ನು ಹೊಡೆಯಲು ಪ್ರತ್ಯೇಕ ಲಿಂಗಾಯುತ ಧರ್ಮದ ಹೋರಾಟವನ್ನು ಅಧಿಕಾರ ದಹಕ್ಕಾಗಿ ಬಳಸಿಕೊಂಡಿರುವುದು ದುರಂತ. ವೀರಶೈವ ಲಿಂಗಾಯುತ ಪಂಚಮ ಸಾಲಿ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಮತ್ತು ಮುಖಂಡ ಮೇಲೆ ದೌರ್ಜನ್ಯ ಮಾಡಿರುವ ಸಂವಿಧಾನ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಈ ಕೂಡಲೆ ವಜಾ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೀತೇಂದ್ರ ಹುಲಿಕುಂಟೆ, ಪಿ.ರುದ್ರೇಶ್ ವಿ.ಹೆಚ್.ಪಿ, ತಿಪ್ಪೇಶ್ ಗಾರೇಹಟ್ಟಿ, ಮಂಜುನಾಥ್, ವೀರೇಶ್, ಸಂಜಯ್ ಜಾಲಿಕಟ್ಟೆ, ಗುರುರಾಜ್, ಅಭಿಲಾಶ್, ದೀಲಿಪ್, ಮಲ್ಲಿಕಾರ್ಜುನ್ ಇನ್ನು ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...