Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳಿಗಾಲದಲ್ಲಿ ರಕ್ತದೊತ್ತಡ ಹೆಚ್ಚಾಗಬಾರದೇ ? ಈ ಹಣ್ಣುಗಳನ್ನು ತಿನ್ನಿ …!

---Advertisement---

 

ಸುದ್ದಿಒನ್ |

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಬದಲಾಗುತ್ತಿರುವ ಜೀವನಶೈಲಿಯಿಂದ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ಆರೋಗ್ಯವನ್ನು ನಮ್ಮ ಕೈಯಲ್ಲಿಯೇ ಇಟ್ಟುಕೊಳ್ಳಬಹುದು. ಆದರೆ, ಚಳಿಗಾಲದಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ಎಚ್ಚರಿಕೆ ವಹಿಸುವುದು ಮುಖ್ಯ.

ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಸಾಮಾನ್ಯವಾಗಿದೆ. ಈ ಸಮಸ್ಯೆಯು ಗಂಭೀರ ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತದೆ. ಸರಿಯಾದ ಜೀವನಶೈಲಿಯ ಕೊರತೆಯಿಂದಾಗಿ ಈ ರಕ್ತದೊತ್ತಡ ಸಮಸ್ಯೆ ಉಂಟಾಗುತ್ತದೆ. ಆದರೆ ಚಳಿಗಾಲದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸುವ ವಿಧಾನಗಳಿವೆ. ಆಹಾರದಲ್ಲಿ ವಿವಿಧ ಬಗೆಯ ಹಣ್ಣುಗಳನ್ನು ಬಳಸಿಕೊಂಡು ಈ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಿದರೆ ಚಳಿಗಾಲದಲ್ಲಿ ರಕ್ತದೊತ್ತಡ ಸಮಸ್ಯೆ ಕಾಡುವುದಿಲ್ಲ. ಈ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಪೇರಲೆ ಹಣ್ಣಿನಲ್ಲಿ 688 ಮಿಗ್ರಾಂ ಪೊಟ್ಯಾಸಿಯಮ್ ಇರುತ್ತದೆ. ಇದು ರಕ್ತವನ್ನು ಚೆನ್ನಾಗಿ ಹರಿಯುವಂತೆ ಮಾಡುತ್ತದೆ. ಹೃದಯದ ಜೀವಕೋಶಗಳ ಆರೋಗ್ಯವನ್ನು ಕಾಪಾಡುತ್ತದೆ.

ಕಿವಿ ಹಣ್ಣಿನಲ್ಲಿ ಸಾಕಷ್ಟು ಪೊಟ್ಯಾಸಿಯಮ್ ಕೂಡ ಇದೆ. 100 ಗ್ರಾಂ ಕಿವಿ ಹಣ್ಣಿನಲ್ಲಿ 312 ಮಿಗ್ರಾಂ ಪೊಟ್ಯಾಸಿಯಮ್ ಇರುತ್ತದೆ. ಇದು ಸ್ನಾಯುಗಳನ್ನು ಆರೋಗ್ಯಕರವಾಗಿರಿಸುತ್ತದೆ. ಬಾಳೆಹಣ್ಣುಗಳನ್ನು ಸಹ ತಿನ್ನಬಹುದು. ಇದರಲ್ಲಿ ಪೊಟ್ಯಾಸಿಯಮ್ ಕೂಡ ಇದೆ. ಇದೂ ಕೂಡ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ನಿಯಮಿತ ವ್ಯಾಯಾಮದ ಅಭ್ಯಾಸವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ಇದು ಕೇವಲ ಪ್ರಾಥಮಿಕ ಮಾಹಿತಿಯಾಗಿದ್ದು, ಇಲ್ಲಿ ಒದಗಿಸಲಾದ ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...